25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

ಬೆಳ್ತಂಗಡಿ: “ಈ ಬಾರಿ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಸಮಯ ಪ್ರತಿಪಕ್ಷ ಮುಂದಿಟ್ಟ ರಾಜ್ಯದ ಸಮಸ್ಯೆಗಳಿಗೆ ಸರಕಾರ ನೀಡಿದ ಉತ್ತರಗಳಿಂದ ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ ಗೊಂಡಿದೆ”ಎಂದು ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿದರು.

ಅವರು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ಡಿ .18ರಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ “ರಾಜ್ಯವು 125ವರ್ಷಗಳಿಂದ ಕಾಣದ ಬರಗಾಲ ಸ್ಥಿತಿ ಎದುರಿಸುತ್ತಿದೆ. ಆದರೂ ಸರಕಾರ ಈ ಬಗ್ಗೆ ಇನ್ನೂ ಯಾವುದೇ ಪರಿಹಾರ ನೀಡಲು ಕ್ರಮ ಕೈಗೊಂಡಿಲ್ಲ. 2ಸಾವಿರ ರೂ.ಘೋಷಣೆ ಮಾಡಿದ್ದರು ಅದು ರೈತರ ಖಾತೆ ತಲುಪಿಲ್ಲ. ಉತ್ತರ ಕರ್ನಾಟಕದಲ್ಲಿ ನೆನೆಗುದಿಗೆ ಬಿದ್ದಿರುವ ನೀರಿನ ಯೋಜನೆಗಳ ಕುರಿತು ಯೋಚಿಸಿಲ್ಲ. ಅಧಿವೇಶನದಲ್ಲಿ ಬರ ನಿರ್ವಹಣೆಗೆ 10ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಣೆಗೆ ಹಾಗೂ ರೈತರಿಗೆ 2ಲಕ್ಷ ರೂ.ವರೆಗೆ ಸಾಲ ಮನ್ನಾ ಮಾಡಲು ಪ್ರತಿಪಕ್ಷ ಆಗ್ರಹಿಸಿತ್ತು, ಆದರೆ ಸರಕಾರ ಸ್ಪಂದನೆ ನೀಡಿಲ್ಲ. ಹಿಂದುಳಿದ ವರ್ಗಕ್ಕೆ 50ಕೋಟಿ ರೂ. ಅಲ್ಪಸಂಖ್ಯಾತರ ಅಭಿವೃದ್ಧಿಗೆ 10ಸಾವಿರ ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದರು ಸರಕಾರ ಅದನ್ನು ಬಿಡುಗಡೆ ಗೊಳಿಸುವ ಸ್ಥಿತಿಯಲ್ಲಿಲ್ಲ ಎಂದರು.
ಇದುವರೆಗೆ ಸರಕಾರ ನಿಗಮಗಳಿಗೆ ಒಂದು ರೂ.ಬಿಡುಗಡೆ ಗೊಳಿಸಿರುವುದಿಲ್ಲ.ಪರಿಶಿಷ್ಟ ಜಾತಿ, ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟಿದ್ದ 11ಸಾವಿರ ಕೋಟಿ ರೂ.ಗ್ಯಾರಂಟಿ ಯೋಜನೆಗೆ ಉಪಯೋಗಿಸಿ ಅನ್ಯಾಯ ಮಾಡಲಾಗಿದೆ. ರೈತರ, ಶಾಲಾ ಮಕ್ಕಳ, ಕಾರ್ಮಿಕರ ಹಲವು ಯೋಜನೆಗಳನ್ನು ಕಡಿತಗೊಳಿಸಲಾಗಿದೆ.
ಶಾಸಕರ ಪ್ರದೇಶಾಭಿವೃದ್ದಿ ನಿಧಿಯ 2ಕೋಟಿ ರೂ. ಪೈಕಿ,50 ಲಕ್ಷ ರೂ. ಮಾತ್ರ ಬಿಡುಗಡೆಗೊಂಡಿದೆ. ಒಟ್ಟಿನಲ್ಲಿ ಎಲ್ಲರಿಗೂ ಉಚಿತ, ಆರ್ಥಿಕ ಹಿನ್ನಡೆ ಖಚಿತ ಎಂಬ ಸ್ಥಿತಿ ಸದ್ಯ ರಾಜ್ಯದಲ್ಲಿದೆ” ಎಂದು ಹೇಳಿದರು.


-ಬಿಡುಗಡೆಗೊಳ್ಳದ ಕೃಷಿಸಾಲದ ಹೆಚ್ಚುವರಿ ಮೊತ್ತ-
ಈ ಬಾರಿಯ ಬಜೆಟ್ ನಲ್ಲಿ ಶೂನ್ಯ ದರದಲ್ಲಿ ಸಹಕಾರಿ ಸಂಘಗಳು ನೀಡುವ 3ಲಕ್ಷ ರೂ.ಸಾಲವನ್ನು 5ಲಕ್ಷ ರೂ.ಗೆ,ಹಾಗೂ ದೀರ್ಘಾವಧಿ ಸಾಲದ ಮೊತ್ತವನ್ನು 10ರಿಂದ 15ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಆದರೆ ಸರಕಾರ ಇನ್ನೂ ಹಣ ಬಿಡುಗಡೆಗೊಳಿಸದ ಕಾರಣ ಇದು ರೈತರನ್ನು ತಲುಪಿಲ್ಲ.ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ. ತಾಲೂಕಿನ ಫಾರ್ಮ್ ನಂ.3,ವಿದ್ಯುತ್ ಕಡಿತ ಕಳೆಂಜದ ಘಟನೆಯನ್ನು ಸರಕಾರದ ಗಮನಕ್ಕೆ ತರಲಾಗಿದೆ. ಕಳೆಂಜದ ವಿಚಾರ ವಿಧಾನ ಸಭೆ,ಪರಿಷತ್ ನ ಹಕ್ಕುಚ್ಯುತಿ ಸಮಿತಿ ಮುಂದಿದ್ದು, ಅರಣ್ಯ ಸಚಿವರು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಗೌಡ, ಶ್ರೀನಿವಾಸ್ ರಾವ್, ಸಹಕಾರಿ ಧುರೀಣ ಮಹಾವೀರ ಮರೋಡಿ ಉಪಸ್ಥಿತರಿದ್ದರು.

Related posts

ಅಂತರ್ ರಾಜ್ಯ ಖೋ ಖೋ ಪಂದ್ಯಾಟ: ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ನಯನಾಡು ಸ.ಪ್ರೌ. ಶಾಲೆ ವಿದ್ಯಾರ್ಥಿಗಳು

Suddi Udaya

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

Suddi Udaya

ಅ.5: ಓಡೀಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದಿಂದ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು

Suddi Udaya

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

Suddi Udaya

ಬಿಜೆಪಿ ಚಾರ್ಮಾಡಿ ಶಕ್ತಿಕೇಂದ್ರದ ಬೂತ್ ಮಟ್ಟದ ಯುವ ಮೋರ್ಚಾ ಸಂಚಾಲಕರ ಆಯ್ಕೆ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದಿಂದ ಡಿ.2 ಯಕ್ಷ ಸಂಭ್ರಮ 2023

Suddi Udaya
error: Content is protected !!