April 2, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ


ವೇಣೂರು: ನಿಗದಿತವಾಗಿ ಕಾಲಕಾಲಕ್ಕೆ ಹೃದಯದ ತಪಾಸಣೆ ನಡೆಸಿ ಸಕಾಲಿಕ ಚಿಕಿತ್ಸೆ ನೀಡಿದಾಗ ಪ್ರಾಣಾಪಾಯದಿಂದ ಪಾರಾಗಬಹುದು ಎಂದು ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯ ಹೃದ್ರೋಗತಜ್ಞ ಡಾ. ಪದ್ಮನಾಭ ಕಾಮತ್ ಹೇಳಿದರು.

ಅವರು ಡಿ.17 ರಂದು ವೇಣೂರಿನಲ್ಲಿ ಭರತೇಶ ಸಮುದಾಯ ಭವನದಲ್ಲಿ ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಜನಮಂಗಲ ಕಾರ್ಯಕ್ರಮದಡಿ ಆಯೋಜಿಸಿದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.


ಗ್ರಾಮೀಣ ಪ್ರದೇಶದ ಜನರು ಮಂಗಳೂರಿಗೆ ಬರಲು ವಾಹನದ ಸಮಸ್ಯೆ, ಮಾಹಿತಿಯ ಕೊರತೆ ಮೊದಲಾದ ಅನೇಕ ಸಮಸ್ಯೆಗಳಿರುತ್ತವೆ. ಆದರೂ, ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಗತಿಯ ಆಧುನಿಕ ಯುಗದಲ್ಲಿ  ಸಕಾಲಿಕ ಚಿಕಿತ್ಸೆ ಲಭಿಸದೆ ತೊಂದರೆ ಆಗಬಾರದು ಎಂದು ಕೆ.ಎಂ.ಸಿ. ಆಸ್ಪತ್ರೆ ಅನೇಕ ಸೇವಾ ಯೋಜನೆಗಳನ್ನು ರೂಪಿಸಿದೆ. ಎಲ್ಲರೂ ಇದರ ಸದುಪಯೋಗ  ಪಡೆಯಬೇಕೆಂದು ಅವರು ಸಲಹೆ ನೀಡಿದರು.


ತನ್ನ ತಂದೆ ನಾರಾವಿ ಸರ್ಕಾರಿ ಆಸ್ಪತ್ರೆಯಲ್ಲಿ ಮುಖ್ಯ ವೈದ್ಯಾಧಿಕಾರಿಯಾಗಿ ಹಲವು ವರ್ಷಗಳಲ್ಲಿ ಸೇವೆ ಸಲ್ಲಿಸಿರುವುದರಿಂದ ವೇಣೂರು ಪರಿಸರದ ಜನರೆಲ್ಲ ತಮ್ಮ ಕುಟುಂಬದವರಿಗೆ ಆಪ್ತರೂ, ಆತ್ಮೀಯರೂ ಆಗಿದ್ದಾರೆ ಎಂದು ಧನ್ಯತೆಯಿಂದ ಸ್ಮರಿಸಿದರು.
ವೇಣೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನೇಮಯ್ಯ ಕುಲಾಲ್, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಮತ್ತು ಕೆ.ಎಂ.ಸಿ. ಆಸ್ಪತ್ರೆಯ ಡಾ. ದೀಪಕ್ ಮಡಿ ಹಾಗೂ ಡಾ. ಆನಂದ ಹೆಗ್ಡೆ ಶುಭಾಶಂಸನೆ ಮಾಡಿದರು.
ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಿದರು.
ಡಾ. ಶೌರ್ಯ ಬೆನರ್ಜಿ, ಡಾ. ದಿತೇಶ್, ಎಂ. ಡಾ. ಪ್ರಣೀತಾ, ಡಾ. ಶಂಕರನ್ ನಂಬೂದಿರಿ ಉಪಸ್ಥಿತರಿದ್ದರು.
ಡಾ. ಜಗದೀಶ ಚೌಟ, ಡಾ. ಶಾಂತಿಪ್ರಸಾದ್, ಡಾ. ಪೌಸ್ಟಿಲ್ ಅಜಿಲ ಮತ್ತು ಡಾ. ಆಶೀರ್ವಾದ್, ಎಂ.ಪಿ. ಶಿಬಿರದ ಆಯೋಜನೆಯಲ್ಲಿ ಸಹಕರಿಸಿದರು.
ಮಸ್ತಕಾಭಿಷೇಕ ಸಮಿತಿಯ ಪ್ರಧಾನಕಾರ್ಯದರ್ಶಿ ಪ್ರವೀಣ್‌ಕುಮಾರ್ ಇಂದ್ರ ಸ್ವಾಗತಿಸಿದರು. ಮಹಾವೀರ್ ಜೈನ್ ಮೂಡುಕೋಡಿಗುತ್ತು ಧನ್ಯವಾದವಿತ್ತರು.

Related posts

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಉಜಿರೆ ವರ್ತಕರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ರಾಷ್ಟ್ರ ಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ : ಕುತ್ಲೂರು ಗ್ರಾಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

Suddi Udaya
error: Content is protected !!