23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ


ವೇಣೂರು: ನಿಗದಿತವಾಗಿ ಕಾಲಕಾಲಕ್ಕೆ ಹೃದಯದ ತಪಾಸಣೆ ನಡೆಸಿ ಸಕಾಲಿಕ ಚಿಕಿತ್ಸೆ ನೀಡಿದಾಗ ಪ್ರಾಣಾಪಾಯದಿಂದ ಪಾರಾಗಬಹುದು ಎಂದು ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯ ಹೃದ್ರೋಗತಜ್ಞ ಡಾ. ಪದ್ಮನಾಭ ಕಾಮತ್ ಹೇಳಿದರು.

ಅವರು ಡಿ.17 ರಂದು ವೇಣೂರಿನಲ್ಲಿ ಭರತೇಶ ಸಮುದಾಯ ಭವನದಲ್ಲಿ ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಜನಮಂಗಲ ಕಾರ್ಯಕ್ರಮದಡಿ ಆಯೋಜಿಸಿದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.


ಗ್ರಾಮೀಣ ಪ್ರದೇಶದ ಜನರು ಮಂಗಳೂರಿಗೆ ಬರಲು ವಾಹನದ ಸಮಸ್ಯೆ, ಮಾಹಿತಿಯ ಕೊರತೆ ಮೊದಲಾದ ಅನೇಕ ಸಮಸ್ಯೆಗಳಿರುತ್ತವೆ. ಆದರೂ, ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಗತಿಯ ಆಧುನಿಕ ಯುಗದಲ್ಲಿ  ಸಕಾಲಿಕ ಚಿಕಿತ್ಸೆ ಲಭಿಸದೆ ತೊಂದರೆ ಆಗಬಾರದು ಎಂದು ಕೆ.ಎಂ.ಸಿ. ಆಸ್ಪತ್ರೆ ಅನೇಕ ಸೇವಾ ಯೋಜನೆಗಳನ್ನು ರೂಪಿಸಿದೆ. ಎಲ್ಲರೂ ಇದರ ಸದುಪಯೋಗ  ಪಡೆಯಬೇಕೆಂದು ಅವರು ಸಲಹೆ ನೀಡಿದರು.


ತನ್ನ ತಂದೆ ನಾರಾವಿ ಸರ್ಕಾರಿ ಆಸ್ಪತ್ರೆಯಲ್ಲಿ ಮುಖ್ಯ ವೈದ್ಯಾಧಿಕಾರಿಯಾಗಿ ಹಲವು ವರ್ಷಗಳಲ್ಲಿ ಸೇವೆ ಸಲ್ಲಿಸಿರುವುದರಿಂದ ವೇಣೂರು ಪರಿಸರದ ಜನರೆಲ್ಲ ತಮ್ಮ ಕುಟುಂಬದವರಿಗೆ ಆಪ್ತರೂ, ಆತ್ಮೀಯರೂ ಆಗಿದ್ದಾರೆ ಎಂದು ಧನ್ಯತೆಯಿಂದ ಸ್ಮರಿಸಿದರು.
ವೇಣೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನೇಮಯ್ಯ ಕುಲಾಲ್, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಮತ್ತು ಕೆ.ಎಂ.ಸಿ. ಆಸ್ಪತ್ರೆಯ ಡಾ. ದೀಪಕ್ ಮಡಿ ಹಾಗೂ ಡಾ. ಆನಂದ ಹೆಗ್ಡೆ ಶುಭಾಶಂಸನೆ ಮಾಡಿದರು.
ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಿದರು.
ಡಾ. ಶೌರ್ಯ ಬೆನರ್ಜಿ, ಡಾ. ದಿತೇಶ್, ಎಂ. ಡಾ. ಪ್ರಣೀತಾ, ಡಾ. ಶಂಕರನ್ ನಂಬೂದಿರಿ ಉಪಸ್ಥಿತರಿದ್ದರು.
ಡಾ. ಜಗದೀಶ ಚೌಟ, ಡಾ. ಶಾಂತಿಪ್ರಸಾದ್, ಡಾ. ಪೌಸ್ಟಿಲ್ ಅಜಿಲ ಮತ್ತು ಡಾ. ಆಶೀರ್ವಾದ್, ಎಂ.ಪಿ. ಶಿಬಿರದ ಆಯೋಜನೆಯಲ್ಲಿ ಸಹಕರಿಸಿದರು.
ಮಸ್ತಕಾಭಿಷೇಕ ಸಮಿತಿಯ ಪ್ರಧಾನಕಾರ್ಯದರ್ಶಿ ಪ್ರವೀಣ್‌ಕುಮಾರ್ ಇಂದ್ರ ಸ್ವಾಗತಿಸಿದರು. ಮಹಾವೀರ್ ಜೈನ್ ಮೂಡುಕೋಡಿಗುತ್ತು ಧನ್ಯವಾದವಿತ್ತರು.

Related posts

ಬಂದಾರು : ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ ಒಕ್ಕೂಟದ ವತಿಯಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸಂಭ್ರಮ 2025

Suddi Udaya

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

Suddi Udaya

ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!