25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ


ವೇಣೂರು: ನಿಗದಿತವಾಗಿ ಕಾಲಕಾಲಕ್ಕೆ ಹೃದಯದ ತಪಾಸಣೆ ನಡೆಸಿ ಸಕಾಲಿಕ ಚಿಕಿತ್ಸೆ ನೀಡಿದಾಗ ಪ್ರಾಣಾಪಾಯದಿಂದ ಪಾರಾಗಬಹುದು ಎಂದು ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯ ಹೃದ್ರೋಗತಜ್ಞ ಡಾ. ಪದ್ಮನಾಭ ಕಾಮತ್ ಹೇಳಿದರು.

ಅವರು ಡಿ.17 ರಂದು ವೇಣೂರಿನಲ್ಲಿ ಭರತೇಶ ಸಮುದಾಯ ಭವನದಲ್ಲಿ ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಜನಮಂಗಲ ಕಾರ್ಯಕ್ರಮದಡಿ ಆಯೋಜಿಸಿದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.


ಗ್ರಾಮೀಣ ಪ್ರದೇಶದ ಜನರು ಮಂಗಳೂರಿಗೆ ಬರಲು ವಾಹನದ ಸಮಸ್ಯೆ, ಮಾಹಿತಿಯ ಕೊರತೆ ಮೊದಲಾದ ಅನೇಕ ಸಮಸ್ಯೆಗಳಿರುತ್ತವೆ. ಆದರೂ, ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಗತಿಯ ಆಧುನಿಕ ಯುಗದಲ್ಲಿ  ಸಕಾಲಿಕ ಚಿಕಿತ್ಸೆ ಲಭಿಸದೆ ತೊಂದರೆ ಆಗಬಾರದು ಎಂದು ಕೆ.ಎಂ.ಸಿ. ಆಸ್ಪತ್ರೆ ಅನೇಕ ಸೇವಾ ಯೋಜನೆಗಳನ್ನು ರೂಪಿಸಿದೆ. ಎಲ್ಲರೂ ಇದರ ಸದುಪಯೋಗ  ಪಡೆಯಬೇಕೆಂದು ಅವರು ಸಲಹೆ ನೀಡಿದರು.


ತನ್ನ ತಂದೆ ನಾರಾವಿ ಸರ್ಕಾರಿ ಆಸ್ಪತ್ರೆಯಲ್ಲಿ ಮುಖ್ಯ ವೈದ್ಯಾಧಿಕಾರಿಯಾಗಿ ಹಲವು ವರ್ಷಗಳಲ್ಲಿ ಸೇವೆ ಸಲ್ಲಿಸಿರುವುದರಿಂದ ವೇಣೂರು ಪರಿಸರದ ಜನರೆಲ್ಲ ತಮ್ಮ ಕುಟುಂಬದವರಿಗೆ ಆಪ್ತರೂ, ಆತ್ಮೀಯರೂ ಆಗಿದ್ದಾರೆ ಎಂದು ಧನ್ಯತೆಯಿಂದ ಸ್ಮರಿಸಿದರು.
ವೇಣೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನೇಮಯ್ಯ ಕುಲಾಲ್, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಮತ್ತು ಕೆ.ಎಂ.ಸಿ. ಆಸ್ಪತ್ರೆಯ ಡಾ. ದೀಪಕ್ ಮಡಿ ಹಾಗೂ ಡಾ. ಆನಂದ ಹೆಗ್ಡೆ ಶುಭಾಶಂಸನೆ ಮಾಡಿದರು.
ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಿದರು.
ಡಾ. ಶೌರ್ಯ ಬೆನರ್ಜಿ, ಡಾ. ದಿತೇಶ್, ಎಂ. ಡಾ. ಪ್ರಣೀತಾ, ಡಾ. ಶಂಕರನ್ ನಂಬೂದಿರಿ ಉಪಸ್ಥಿತರಿದ್ದರು.
ಡಾ. ಜಗದೀಶ ಚೌಟ, ಡಾ. ಶಾಂತಿಪ್ರಸಾದ್, ಡಾ. ಪೌಸ್ಟಿಲ್ ಅಜಿಲ ಮತ್ತು ಡಾ. ಆಶೀರ್ವಾದ್, ಎಂ.ಪಿ. ಶಿಬಿರದ ಆಯೋಜನೆಯಲ್ಲಿ ಸಹಕರಿಸಿದರು.
ಮಸ್ತಕಾಭಿಷೇಕ ಸಮಿತಿಯ ಪ್ರಧಾನಕಾರ್ಯದರ್ಶಿ ಪ್ರವೀಣ್‌ಕುಮಾರ್ ಇಂದ್ರ ಸ್ವಾಗತಿಸಿದರು. ಮಹಾವೀರ್ ಜೈನ್ ಮೂಡುಕೋಡಿಗುತ್ತು ಧನ್ಯವಾದವಿತ್ತರು.

Related posts

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಪವಿತ್ರ ಗರಿಗಳ ಆಶೀರ್ವಾದ ಭಾನುವಾರ

Suddi Udaya

ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ರಿಗೆ ಗುಂಪಲಾಜೆ ಶ್ರೀ ನಾಗ ರಕ್ತೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಗೌರವಾರ್ಪಣೆ

Suddi Udaya

ದೇಗುಲದ ಪರಿಸರದಲ್ಲಿ ತಿರುಗಾಡುತ್ತಿದ್ದ ಒಂಟಿ ಮಹಿಳೆಯನ್ನು ಅವರ ಊರಿಗೆ ಕಳುಹಿಸಿ ಮಾನವೀಯತೆ ಮೆರೆದ ಪೋಲೀಸ್ ಇಲಾಖೆ ಹಾಗೂ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya
error: Content is protected !!