ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ

ಇಳಂತಿಲ: ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ರಾಜೇಶ್ ಕೆ.ವಿ ಮತ್ತು ಸಿಬ್ಬಂದಿಯವರು ವಾಹನ ತಪಾಸಣೆಯ ನಿಮಿತ್ತ ಕಾರನ್ನು ನಿಲ್ಲಿಸಿದಾಗ ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆಯಾಗಿದ್ದು ಆರೋಪಿಯನ್ನು ಹಾಗೂ ಅದರಲ್ಲಿ ಇದ್ದ ಅಂದಾಜು ರೂ 13,000/- ಮೌಲ್ಯದ 6.4 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುವನ್ನು ವಶಪಡಿಸಿಕೊಂಡ ಘಟನೆ ಡಿ.17 ರಂದು ನಡೆದಿದೆ.

ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಕೂಟೇಲು ದರ್ಗಾ ಶರೀಫ್ ಬಳಿ ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ರಾಜೇಶ್ ಕೆ.ವಿ ಮತ್ತು ಸಿಬ್ಬಂಧಿಯವರು ವಾಹನ ತಪಾಸಣೆಯ ನಿಮಿತ್ತ ಕೆಎ-19-ಎನ್-8139ನೇ ನೊಂದಣಿಯ ಕಾರನ್ನು ನಿಲ್ಲಿಸಿದಾಗ, ಚಾಲಕನು ವಾಹನವನ್ನು ನಿಲ್ಲಿಸಿ ಪರಾರಿಯಾಗಲು ಯತ್ನಿಸಿರುತ್ತಾನೆ. ಆತನನ್ನು ತಡೆದು ವಿಚಾರಿಸಿದಾಗ ಆತನು ಬೆಳ್ತಂಗಡಿ ಇಳಂತಿಲ ಗ್ರಾಮದ ನಿವಾಸಿ ಯಾಸಿರ್ (29) ಎಂಬುದಾಗಿ ತಿಳಿದಿಬಂದಿದ್ದು, ಕಾರನ್ನು ಪರಿಶೀಲಿಸಿದಾಗ ಅದರಲ್ಲಿ ಅಂದಾಜು ರೂ 13,000/- ಮೌಲ್ಯದ 6.4 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆಯಾಗಿರುತ್ತದೆ. ಮುಂದಿನ ಕಾನೂನು ಕ್ರಮಕ್ಕಾಗಿ ಸದರಿ ಕಾರು, ಕಾರಿನಲ್ಲಿದ್ದ ಚಿಕ್ಕ ಎಲೆಕ್ಟ್ರೋನಿಕ್ ಡಿಜಿಟಲ್ ತೂಕ ಮಾಪನ ಸಾಧನ, 01 ಮೊಬೈಲ್ ಮತ್ತು ಎಂ.ಡಿ.ಎಂ.ಎ ಮಾದಕವಸ್ತುವಿನೊಂದಿಗೆ ಆರೋಪಿಯನ್ನು ವಶಕ್ಕೆ ಪಡೆದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 168/2023 ಕಲಂ:, U/s-8(c) 22(b) ಎನ್.ಡಿ.ಪಿ.ಎಸ್ ಕಾಯ್ದೆ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಸೆ.28: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಫೆ.12-16: ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಆರಾಟ್ ಉತ್ಸವ

Suddi Udaya

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಸಮಗ್ರ ಪ್ರಶಸ್ತಿ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya
error: Content is protected !!