26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಹಿರಿಯರ ಸೇವಾ ಪ್ರತಿಷ್ಠಾನದಿಂದ ದಶ ಸಾಧಕರಿಗೆ ಗೌರವಾರ್ಪಣೆ     

 ಕೊಕ್ಕಡ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಟಾನದ ವತಿಯಿಂದ ಡಿ 17ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ  ಗಣೇಶ ಕಲಾ ಭವನದಲ್ಲಿ ನಡೆದ ದ್ವಿತೀಯ ವಾರ್ಷಿಕೋತ್ಸವದಲ್ಲಿ  ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಸಾಧಕರನ್ನು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಯವರು ಹಾಗು ಗಣ್ಯ ಅತಿಥಿಗಳು ಸನ್ಮಾನಿಸಿ ಗೌರವಿಸಿದರು.                                                                                 

 ಶ್ರೀ  ಎಡನೀರು  ಮಠದ ಆಡಳಿತ ಅಧಿಕಾರಿ ರಾಜೇಂದ್ರ ಕಲ್ಲೂರಾಯ, ಮೂಡಬಿದ್ರಿಯ ನ್ಯಾಯವಾದಿ ಬಾಹುಬಲಿ ಪ್ರಸಾದ್, ನಿವೃತ್ತ ನೌಕರರ ಸಂಘದ ಅಧ್ಯಕ್ಷ ವಸಂತ ಸುವರ್ಣ, ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಂಗಯ್ಯ ಸುಳ್ಯ, ಪರಿಸರ ತಜ್ಞ ಪ್ರೊ.ರಾಜಮಣಿ  ರಾಮಕುಂಜ, ಸುರೇಶ ಬೈಂದೂರು,ಸಾಮಾಜಿಕ ಕಾರ್ಯಕರ್ತ ಉಮೇಶ್ ಶೆಣೈ, ಶ್ರೀ ಕ್ಷೇತ್ರ ಸೌತಡ್ಕದ ಸಿಬಂದಿಗಳಾದ  ಬಿ.ಕೇಶವ ಶಬರಾಯ,   ಎಂ .ವೈ ರಾಮಕೃಷ್ಣ ಮತ್ತು ಶ್ರೀಮತಿ ವಿನೋದ ಕೆ.ಶೆಟ್ಟಿ ಅವರನ್ನು ಎಡನೀರು ಶ್ರೀಗಳವರು ಮತ್ತು ಗಣ್ಯ ಅತಿಥಿಗಳು ಸನ್ಮಾನಿಸಿ ಗೌರವಿಸಿದರು.

ಜಯರಾಮ ಭಂಡಾರಿ, ಭವಾನಿಶಂಕರ್ ಮತ್ತು ಮಹಾಬಲ ರೈ   ಸನ್ಮಾನಿತರ ಸನ್ಮಾನ ಪತ್ರ ವಾಚಿಸಿದರು. ಸನ್ಮಾನಿತರ ಪರವಾಗಿ  ರಾಜೇಂದ್ರ ಕಲ್ಲೂರಾಯ ಉತ್ತರಿಸಿ ವಯಸ್ಸು, ಸ್ಥಾನಮಾನ, ಗಳಿಸಿದ ಜ್ಞಾನ ಸಂಪಾದನೆ ಮತ್ತು ಸಮಾಜಮುಖಿ ಕೆಲಸಗಳಿಂದ  ಹಿರಿತನ ಪಡೆಯುತ್ತಾರೆ. ಹಿರಿಯರ ಸಮಸ್ಯೆಗಳಿಗೆ  ಪ್ರತಿಷ್ಠಾನದಿಂದ ಪರಿಹಾರ  ದೊರೆಯಲಿ ಎಂದು ಆಶಿಸಿದರು.

Related posts

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya

ಧರ್ಮಸ್ಥಳ: ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ

Suddi Udaya

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ:ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಬ್ಲಾಕ್ ಕಾಂಗ್ರೆಸ್ ನಿಂದ ಪೊಲೀಸ್ ದೂರು

Suddi Udaya
error: Content is protected !!