24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಹಿರಿಯರ ಸೇವಾ ಪ್ರತಿಷ್ಠಾನದಿಂದ ದಶ ಸಾಧಕರಿಗೆ ಗೌರವಾರ್ಪಣೆ     

 ಕೊಕ್ಕಡ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಟಾನದ ವತಿಯಿಂದ ಡಿ 17ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ  ಗಣೇಶ ಕಲಾ ಭವನದಲ್ಲಿ ನಡೆದ ದ್ವಿತೀಯ ವಾರ್ಷಿಕೋತ್ಸವದಲ್ಲಿ  ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಸಾಧಕರನ್ನು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಯವರು ಹಾಗು ಗಣ್ಯ ಅತಿಥಿಗಳು ಸನ್ಮಾನಿಸಿ ಗೌರವಿಸಿದರು.                                                                                 

 ಶ್ರೀ  ಎಡನೀರು  ಮಠದ ಆಡಳಿತ ಅಧಿಕಾರಿ ರಾಜೇಂದ್ರ ಕಲ್ಲೂರಾಯ, ಮೂಡಬಿದ್ರಿಯ ನ್ಯಾಯವಾದಿ ಬಾಹುಬಲಿ ಪ್ರಸಾದ್, ನಿವೃತ್ತ ನೌಕರರ ಸಂಘದ ಅಧ್ಯಕ್ಷ ವಸಂತ ಸುವರ್ಣ, ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಂಗಯ್ಯ ಸುಳ್ಯ, ಪರಿಸರ ತಜ್ಞ ಪ್ರೊ.ರಾಜಮಣಿ  ರಾಮಕುಂಜ, ಸುರೇಶ ಬೈಂದೂರು,ಸಾಮಾಜಿಕ ಕಾರ್ಯಕರ್ತ ಉಮೇಶ್ ಶೆಣೈ, ಶ್ರೀ ಕ್ಷೇತ್ರ ಸೌತಡ್ಕದ ಸಿಬಂದಿಗಳಾದ  ಬಿ.ಕೇಶವ ಶಬರಾಯ,   ಎಂ .ವೈ ರಾಮಕೃಷ್ಣ ಮತ್ತು ಶ್ರೀಮತಿ ವಿನೋದ ಕೆ.ಶೆಟ್ಟಿ ಅವರನ್ನು ಎಡನೀರು ಶ್ರೀಗಳವರು ಮತ್ತು ಗಣ್ಯ ಅತಿಥಿಗಳು ಸನ್ಮಾನಿಸಿ ಗೌರವಿಸಿದರು.

ಜಯರಾಮ ಭಂಡಾರಿ, ಭವಾನಿಶಂಕರ್ ಮತ್ತು ಮಹಾಬಲ ರೈ   ಸನ್ಮಾನಿತರ ಸನ್ಮಾನ ಪತ್ರ ವಾಚಿಸಿದರು. ಸನ್ಮಾನಿತರ ಪರವಾಗಿ  ರಾಜೇಂದ್ರ ಕಲ್ಲೂರಾಯ ಉತ್ತರಿಸಿ ವಯಸ್ಸು, ಸ್ಥಾನಮಾನ, ಗಳಿಸಿದ ಜ್ಞಾನ ಸಂಪಾದನೆ ಮತ್ತು ಸಮಾಜಮುಖಿ ಕೆಲಸಗಳಿಂದ  ಹಿರಿತನ ಪಡೆಯುತ್ತಾರೆ. ಹಿರಿಯರ ಸಮಸ್ಯೆಗಳಿಗೆ  ಪ್ರತಿಷ್ಠಾನದಿಂದ ಪರಿಹಾರ  ದೊರೆಯಲಿ ಎಂದು ಆಶಿಸಿದರು.

Related posts

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಮಟ್ಟದ ಜನಸ್ಪಂದನ ಸಭೆ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಶುಚಿತ್ವ ಅಭಿಯಾನ

Suddi Udaya
error: Content is protected !!