25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಹಿರಿಯರ ಸೇವಾ ಪ್ರತಿಷ್ಠಾನದಿಂದ ದಶ ಸಾಧಕರಿಗೆ ಗೌರವಾರ್ಪಣೆ     

 ಕೊಕ್ಕಡ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಟಾನದ ವತಿಯಿಂದ ಡಿ 17ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ  ಗಣೇಶ ಕಲಾ ಭವನದಲ್ಲಿ ನಡೆದ ದ್ವಿತೀಯ ವಾರ್ಷಿಕೋತ್ಸವದಲ್ಲಿ  ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ಸಾಧಕರನ್ನು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಯವರು ಹಾಗು ಗಣ್ಯ ಅತಿಥಿಗಳು ಸನ್ಮಾನಿಸಿ ಗೌರವಿಸಿದರು.                                                                                 

 ಶ್ರೀ  ಎಡನೀರು  ಮಠದ ಆಡಳಿತ ಅಧಿಕಾರಿ ರಾಜೇಂದ್ರ ಕಲ್ಲೂರಾಯ, ಮೂಡಬಿದ್ರಿಯ ನ್ಯಾಯವಾದಿ ಬಾಹುಬಲಿ ಪ್ರಸಾದ್, ನಿವೃತ್ತ ನೌಕರರ ಸಂಘದ ಅಧ್ಯಕ್ಷ ವಸಂತ ಸುವರ್ಣ, ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಂಗಯ್ಯ ಸುಳ್ಯ, ಪರಿಸರ ತಜ್ಞ ಪ್ರೊ.ರಾಜಮಣಿ  ರಾಮಕುಂಜ, ಸುರೇಶ ಬೈಂದೂರು,ಸಾಮಾಜಿಕ ಕಾರ್ಯಕರ್ತ ಉಮೇಶ್ ಶೆಣೈ, ಶ್ರೀ ಕ್ಷೇತ್ರ ಸೌತಡ್ಕದ ಸಿಬಂದಿಗಳಾದ  ಬಿ.ಕೇಶವ ಶಬರಾಯ,   ಎಂ .ವೈ ರಾಮಕೃಷ್ಣ ಮತ್ತು ಶ್ರೀಮತಿ ವಿನೋದ ಕೆ.ಶೆಟ್ಟಿ ಅವರನ್ನು ಎಡನೀರು ಶ್ರೀಗಳವರು ಮತ್ತು ಗಣ್ಯ ಅತಿಥಿಗಳು ಸನ್ಮಾನಿಸಿ ಗೌರವಿಸಿದರು.

ಜಯರಾಮ ಭಂಡಾರಿ, ಭವಾನಿಶಂಕರ್ ಮತ್ತು ಮಹಾಬಲ ರೈ   ಸನ್ಮಾನಿತರ ಸನ್ಮಾನ ಪತ್ರ ವಾಚಿಸಿದರು. ಸನ್ಮಾನಿತರ ಪರವಾಗಿ  ರಾಜೇಂದ್ರ ಕಲ್ಲೂರಾಯ ಉತ್ತರಿಸಿ ವಯಸ್ಸು, ಸ್ಥಾನಮಾನ, ಗಳಿಸಿದ ಜ್ಞಾನ ಸಂಪಾದನೆ ಮತ್ತು ಸಮಾಜಮುಖಿ ಕೆಲಸಗಳಿಂದ  ಹಿರಿತನ ಪಡೆಯುತ್ತಾರೆ. ಹಿರಿಯರ ಸಮಸ್ಯೆಗಳಿಗೆ  ಪ್ರತಿಷ್ಠಾನದಿಂದ ಪರಿಹಾರ  ದೊರೆಯಲಿ ಎಂದು ಆಶಿಸಿದರು.

Related posts

ಬಂದಾರು: ಮೈರೋಳ್ತಡ್ಕ-ವಿವೇಕಾನಂದ ನಗರ-ಕುರಾಯ ದೇವಸ್ಥಾನ ಸಂಪರ್ಕ ರಸ್ತೆ ಮರು ಡಾಮರೀಕರಣ-ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ

Suddi Udaya

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಗೆ ಸತತ ಐದನೇ ಬಾರಿ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya
error: Content is protected !!