23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

ಕೊಕ್ಕಡ: ಡಿ.17 ರಂದು ನಡೆದ ಕೋರಿ ಜಾತ್ರೆಯ ಸಂದರ್ಭದಲ್ಲಿ ಗದ್ದೆಗೆ ಕೋಣಗಳನ್ನು ಇಳಿಸುವ ಸಂಪ್ರದಾಯ ಹಿಂದಿನಿಂದಲೂ ನಡೆಯುತ್ತಾ ಬಂದಿದೆ. ಈ ಬಾರಿಯ ಕೋರಿ ಜಾತ್ರೆಯ ಗದ್ದೆಗೆ ಕಳೆಂಜದ ಹರಿಪ್ರಸಾದ್ ಶೆಟ್ಟಿಯವರ ಕಂಬಳದ ಕೋಣಗಳನ್ನು ಸಂಪ್ರದಾಯದಂತೆ ಮೆರವಣಿಗೆಯಲ್ಲಿ ತಂದು ಗದ್ದೆಗೆ ಇಳಿಸಲಾಯಿತು. ಈಗಿನ ಪರಿಸ್ಥಿತಿಯಲ್ಲಿ ಕೋಣಗಳನ್ನು ಸಾಕುವುದು ಬಹಳ ಕಷ್ಟದ ಕೆಲಸ. ಇಂತಹ ಸಂದರ್ಭದಲ್ಲಿ ಕೋಣಗಳ ಮಾಲಕರಾದ ಹರಿಪ್ರಸಾದ್ ರೈ ರವರಿಗೆ ಕೊಕ್ಕಡದ ಗುತ್ತಿನ ಮನೆಯ ರತ್ನಾಕರ ಭಂಡಾರಿಯವರ ಮನೆಯ ವಠಾರದಲ್ಲಿ ಕಳೆಂಜ ಗ್ರಾಮಸ್ಥರ ಪರವಾಗಿ ಶಾಲು ಹೊದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಅಧ್ಯಕ್ಷ ಕೆ.ಶ್ರೀಧ‌ರ್ ರಾವ್ ಮತ್ತು ಇತರ ಊರ ಗಣ್ಯರು ಉಪಸ್ಥಿತರಿದ್ದರು.

Related posts

ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಶಿರ್ಲಾಲು: ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ

Suddi Udaya

ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ ನೇತೃತ್ವದಲ್ಲಿ ಕುವೆಟ್ಟು ಗ್ರಾ.ಪಂ ವ್ಯಾಪ್ತಿಯ ಸಮಿತಿ ರಚನೆ-ಅಧ್ಯಕ್ಷರಾಗಿ ಯಶೋಧರ ವರಕಬೆ, ಪ್ರ.ಕಾರ್ಯದರ್ಶಿಯಾಗಿ ದಿವ್ಯ ಪಾಯಿಸ್

Suddi Udaya
error: Content is protected !!