September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಡ್ಲೆ : ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

ನಿಡ್ಲೆ : ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿ ಪ್ರತಿಭಾ ದಿನಾಚರಣೆಯು ಡಿ.16ರಂದು ಕಾಲೇಜು ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಡ್ಲೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶ್ಯಾಮಲಾ ವಹಿಸಿದ್ದರು. ಉದ್ಘಾಟನೆಯನ್ನು ಊರಿನ ಹಿರಿಯರಾದ ಸತ್ಯನಾರಾಯಣ ರಾವ್ ನೆರವೇರಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ನಿವೃತ್ತ ಕ್ಷೇತ್ರ ಸಮನ್ವಯಾಧಿಕಾರಿ ಗಣೇಶ್ ಐತಾಳ್ ವಿದ್ಯಾರ್ಥಿಗಳು ಇಟ್ಟುಕೊಳ್ಳಬೇಕಾದ ಗುರಿಯ ಬಗ್ಗೆ ಸ್ಪೂರ್ತಿದಾಯಕ ಮಾತುಗಳನ್ನಾಡಿದರು ಮತ್ತು ಪೋಷಕರಿಗೆ ಅವರ ಜವಾಬ್ದಾರಿಯ ಬಗ್ಗೆ ಕಿವಿಮಾತು ಹೇಳಿದರು.

ಮುಖ್ಯ ಶಿಕ್ಷಕರಾದ ಶ್ರೀಮತಿ ಶಾಂತ ಶೆಟ್ಟಿ ವರದಿ ವಾಚಿಸಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಜಗದೀಶ್ ಮತ್ತು ಮೋಹನ್, ನಿವೃತ್ತ ಮುಖ್ಯ ಶಿಕ್ಷಕರಾದ ರಾಜಗುರು ಹೆಬ್ಬಾರ್, ವಿನಾಯಕ ಜೋಶಿ , ಶ್ರೀಮತಿ ಕಾತ್ಯಾಯಿನಿ, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಪುರುಷೋತ್ತಮ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲೆಯಲ್ಲಿ ಯಕ್ಷ ನಾಟ್ಯವನ್ನು ಕಲಿಸುತ್ತಿರುವ ಈಶ್ವರ ಪ್ರಸಾದ್ ಇ.ವಿ.ಇವರನ್ನು ಸನ್ಮಾನಿಸಲಾಯಿತು. ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆಗಳ ಬಹುಮಾನ ವಿತರಿಸಲಾಯಿತು. ದತ್ತಿ ನಿಧಿ ನೀಡಲಾಯಿತು.

ಶ್ರೀಮತಿ ಶೋಲಿ ಇವರು ಸ್ವಾಗತಿಸಿ, ಶ್ರೀಮತಿ ಸುಚಿತ್ರರವರು ವಂದಿಸಿದ ಕಾರ್ಯಕ್ರಮವನ್ನು ಶರತ್ ಕುಮಾರ್ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಸಹ ಶಿಕ್ಷಕರು, ಅತಿಥಿ ಶಿಕ್ಷಕರು ಶಾಲಾ ವಿದ್ಯಾರ್ಥಿಗಳು, ಎಸ್ ಡಿ ಎಮ್ ಸಿ ಯ ಎಲ್ಲಾ ಸದಸ್ಯರು, ಪೋಷಕರು, ಪೂರ್ವ ವಿದ್ಯಾರ್ಥಿಗಳು ಊರಿನ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದು ಸಹಕರಿಸಿದರು. ಕಾರ್ಯಕ್ರಮದ ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ನೀಡಿದರು. ಅದರಲ್ಲಿ ಹುಲಿ ವೇಷ ಕುಣಿತ ಮತ್ತು ಯಕ್ಷನಾಟ್ಯ ಗಮನ ಸೆಳೆದವು.

Related posts

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಲಾಯಿಲ: ಗಂಗಮ್ಮ ಪೂಜಾರಿ ನಿಧನ

Suddi Udaya

ಕಳೆಂಜ ಗ್ರಾ,ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಸಭೆ

Suddi Udaya
error: Content is protected !!