ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

Suddi Udaya

ಬಳ್ಳಮಂಜ: ಇತಿಹಾಸ ಪ್ರಸಿದ್ಧ ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಡಿ.18ರಂದು ಷಷ್ಠಿ ಮಹೋತ್ಸವ ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು.

ಬೆಳಿಗ್ಗೆ 7 ರಿಂದ ಷಷ್ಠಿ ಉತ್ಸವ ಪ್ರಾರಂಭಗೊಂಡು, 11 ಗಂಟೆಗೆ ಬ್ರಹ್ಮರಥೋತ್ಸವ ನಡೆಯಿತು. ನಂತರ ಮಹಾಪೂಜೆ ಅನ್ನ ಸಂತರ್ಪಣೆ ನಡೆಯಿತು. ಸಂಜೆ ಕಟ್ಟೆ ಪೂಜೆ ದರ್ಶನ ಬಳಿ ನಡೆಯಲಿದೆ.


ಈ ಸಂದರ್ಭದಲ್ಲಿ ಆನುವಂಶೀಯ ಆಡಳಿತ ಮೊಕ್ತೇಸರ ಡಾ| ಎಂ.ಹರ್ಷ ಸಂಪಿಗೆತ್ತಾಯ, ಡಾ.ಶಿವಪ್ರಸಾದ್, ಡಾ.ಗುರುಪ್ರಸಾದ್ ತಂತ್ರಿವರ್ಯರು, ಅರ್ಚಕರು, ಊರ ಪರ ಊರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಗಂಧ ಪ್ರಸಾದ ಸ್ವೀಕರಿಸಿದರು.

Leave a Comment

error: Content is protected !!