37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

ಶಿಬಾಜೆ: ಬ್ಯಾಂಕ್‌ ಆಪ್ ಬರೋಡಾ ಶಿಶಿಲ ಮತ್ತು ಶಿಬಾಜೆ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ಡಿ.16 ರಂದು ಶಿಬಾಜೆ ಗ್ರಾಮ ಪಂಚಾಯತಿಯ ಪೆರ್ಲದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಿಶಿಲ ಬ್ಯಾಂಕ್‌ ಆಪ್ ಬರೋಡದ ಪ್ರಬಂದಕರಾದ ರಾಕೇಶ್ ರವರು ಉದ್ಘಾಟಿಸಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.ಸಭೆಯ ಅಧ್ಯಕ್ಷತೆಯನ್ನು ಪಂಚಾಯತ್ ಉಪಾಧ್ಯಕ್ಷರಾದ ದಿನಕರ್ ಕುರುಪ್ ವಹಿಸಿ ಮಾತನಾಡಿ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಆರ್ಥಿಕ ಸಾಕ್ಷರತ ಸಂಯೋಜಕಿ ಉಷಾ ನಾಯ್ ರವರು ಮತ್ತು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕೊರಗಪ್ಪ ನಾಯ್ಕ ರವರು ವಿವಿಧ ಸೌಲಭ್ಯಗಳ ಹಾಗೂ ಯೋಜನೆಗಳ ಅನುಷ್ಠಾನದ ಬಗ್ಗೆ ವಿಸ್ಕೃತ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೊರಗಪ್ಪ ನಾಯ್ಕ, ಗ್ರಾ.ಪಂ ಉಪಾಧ್ಯಕ್ಷ ದಿನಕರ್ ಕುರುಪ್, ಪಂಚಾಯತ್ ನ ನಿಕಟಪೂರ್ವ ಉಪಾಧ್ಯಕ್ಷ ವಿನಯ ಚಂದ್ರ.ಟಿ, ಸದಸ್ಯರಾದ ವನಿತಾ ವಿ ಶೆಟ್ಟಿಗಾ‌ರ್, ಅರಸಿನಮಕ್ಕಿ ಸರಕಾರಿ ಆಸ್ಪತ್ರೆ ನರ್ಸ್ ಲಲಿತಾ ಉಪಸ್ಥಿತರಿದ್ದರು.
ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಮಹೇಶ್ ಶೆಟ್ಟಿಗಾ‌ರ್, ಸ್ವಾಗತವನ್ನು ದಿನಕ‌ರ್ ಕುರುಪ್, ಧನ್ಯವಾದವನ್ನು ವನಿತಾ ವಿ ಶೆಟ್ಟಿಗಾ‌ರ್ ನೆರವೇರಿಸಿದರು.

Related posts

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡಿಕಟ್ಟೆ ಮೊಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

Suddi Udaya

ಸಿರಿ ಕೇಂದ್ರ ಕಚೇರಿಯಲ್ಲಿ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ವನಮಹೋತ್ಸವ

Suddi Udaya

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರಿಗೆ ಲಯನ್ಸ್ ಕ್ಲಬ್ ನಿಂದ ಹುಟ್ಟುಹಬ್ಬದ ಶುಭಾಶಯ

Suddi Udaya

ಶತಾಯುಷಿ ಚೆಲುವಮ್ಮ ಇರ್ತಿಲಾಲ್ ನಿಧನ

Suddi Udaya

ಶಿರ್ಲಾಲಿನಲ್ಲಿ 25ನೇ ವರ್ಷದ ಗುರುಪೂಜಾ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya
error: Content is protected !!