32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ

ಉಜಿರೆ: ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದ ಟ್ರಸ್ಟಿ ಸಿಬ್ಬಂದಿಗಳು ಮತ್ತು ವಿಶೇಷ ವಿದ್ಯಾರ್ಥಿಗಳಿಗಾಗಿ ಕ್ರಿಸ್ಮಸ್ ಆಚರಣೆಯು ಡಿ.18 ರಂದು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹೋಲಿ ರೆಡಿಮರ್ ಚರ್ಚ್ ನ ವಂದನೀಯ ಫಾದರ್ ವಾಲ್ಟರ್ ಡಿ ಮೆಲ್ಲೋ ಉದ್ಘಾಟಿಸಿ, ಶುಭಹಾರೈಸಿದರು.

ಅಧಕ್ಷತೆಯನ್ನು ಗಣೇಶ್ ಸೇವಾ ಟ್ರಸ್ಟ್ ನ ಅಧ್ಯಕ್ಷ ಮಹಾಬಲ ಮಾರ್ಲಿ ವಹಿಸಿದರು.

ಮುಖ್ಯ ಅತಿಥಿಗಳಾಗಿ ಉಜಿರೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಉಷಾ ಕಿರಣ್ , ಮಡಂತ್ಯಾರು ಮಸೀದಿಯ ಧರ್ಮಗುರುಗಳು ಅಬ್ದುಲ್ ರಝಾಕ್ ಹಾಸಿಮ್, ಉಜಿರೆ ಡೆಂಟಲ್ ಕ್ಲಿನಿಕ್ ಡಾ| ದಯಾಕರ, ದಾನಿಗಳು ಮಾಕ್ಸಿ ವಿ ಅಚಾರ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶ್ರೀ ಗಣೇಶ್ ಸೇವಾ ಟ್ರಸ್ಟ್ ನ ಜತೆ ಕಾರ್ಯದರ್ಶಿ ಪ್ರೊ. ರಾಧಾಕೃಷ್ಣ, ಗೌರವ ಸಲಹೆಗಾರ ಡಾ| ಪ್ರಮೋದ್ ಆರ್ ನಾಯಕ್, ಆಯೋಜಕರಾದ ರೋಶನ್ ಸಿಕ್ವೇರಾ, ಶ್ರೀ ಗಣೇಶ್ ಸೇವಾ ಟ್ರಸ್ಟ್ ನ ಖಜಾಂಚಿ ಜಗದೀಶ್ ಶೆಟ್ಟಿ, ಶ್ರೀ ಗಣೇಶ್ ಸೇವಾ ಟ್ರಸ್ಟ್ ನ ಟ್ರಸ್ಟಿ ಸ್ಟೀವನ್ ಪಿಂಟೋ, ಶ್ರೀ ಗಣೇಶ್ ಸೇವಾ ಟ್ರಸ್ಟ್ ನ ನಿರ್ದೇಶಕ ಮಹಮದ್ ಖಶೀರ್, ಹಾಗೂ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಮಕ್ಕಳು ಪೋಷಕರ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಸಿಬ್ಬಂದಿಗಳು ಪ್ರಾರ್ಥಿಸಿದರು. ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಮುಖ್ಯೋಪಾಧ್ಯಾಯಿನಿ ಮಲ್ಲಿಕಾ ಸ್ವಾಗತಿಸಿದರು. ರುಬೀನಾ ನಿರೂಪಿಸಿ, ಅಕ್ಷತಾ ಧನ್ಯವಾದವಿತ್ತರು.

Related posts

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿ ಕ್ಷೇತ್ರದ ಧುರೀಣ, ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿಯವರಿಗೆ ಸನ್ಮಾನ

Suddi Udaya

ಅಕ್ಷಯ ಕಾಲೇಜಿನ ಬಿಕಾಂ ವಿಥ್ ಏವಿಯೇಷನ್ ಆ್ಯಂಡ್ ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ

Suddi Udaya

ಕುತ್ಲೂರು: ದರ್ಖಾಸು ಮನೆಯ ಶ್ರೀಮತಿ ಅಪ್ಪಿ ನಿಧನ

Suddi Udaya

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ: ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ: ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ

Suddi Udaya

ಮೇಲಂತಬೆಟ್ಟು ನಿವಾಸಿ ಮಲ್ಲಿಕ್ ನಿಧನ

Suddi Udaya
error: Content is protected !!