ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಉಜಿರೆ: ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದ ಟ್ರಸ್ಟಿ ಸಿಬ್ಬಂದಿಗಳು ಮತ್ತು ವಿಶೇಷ ವಿದ್ಯಾರ್ಥಿಗಳಿಗಾಗಿ ಕ್ರಿಸ್ಮಸ್ ಆಚರಣೆಯು ಡಿ.18 ರಂದು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹೋಲಿ ರೆಡಿಮರ್ ಚರ್ಚ್ ನ ವಂದನೀಯ ಫಾದರ್ ವಾಲ್ಟರ್ ಡಿ ಮೆಲ್ಲೋ ಉದ್ಘಾಟಿಸಿ, ಶುಭಹಾರೈಸಿದರು.

ಅಧಕ್ಷತೆಯನ್ನು ಗಣೇಶ್ ಸೇವಾ ಟ್ರಸ್ಟ್ ನ ಅಧ್ಯಕ್ಷ ಮಹಾಬಲ ಮಾರ್ಲಿ ವಹಿಸಿದರು.

ಮುಖ್ಯ ಅತಿಥಿಗಳಾಗಿ ಉಜಿರೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಉಷಾ ಕಿರಣ್ , ಮಡಂತ್ಯಾರು ಮಸೀದಿಯ ಧರ್ಮಗುರುಗಳು ಅಬ್ದುಲ್ ರಝಾಕ್ ಹಾಸಿಮ್, ಉಜಿರೆ ಡೆಂಟಲ್ ಕ್ಲಿನಿಕ್ ಡಾ| ದಯಾಕರ, ದಾನಿಗಳು ಮಾಕ್ಸಿ ವಿ ಅಚಾರ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶ್ರೀ ಗಣೇಶ್ ಸೇವಾ ಟ್ರಸ್ಟ್ ನ ಜತೆ ಕಾರ್ಯದರ್ಶಿ ಪ್ರೊ. ರಾಧಾಕೃಷ್ಣ, ಗೌರವ ಸಲಹೆಗಾರ ಡಾ| ಪ್ರಮೋದ್ ಆರ್ ನಾಯಕ್, ಆಯೋಜಕರಾದ ರೋಶನ್ ಸಿಕ್ವೇರಾ, ಶ್ರೀ ಗಣೇಶ್ ಸೇವಾ ಟ್ರಸ್ಟ್ ನ ಖಜಾಂಚಿ ಜಗದೀಶ್ ಶೆಟ್ಟಿ, ಶ್ರೀ ಗಣೇಶ್ ಸೇವಾ ಟ್ರಸ್ಟ್ ನ ಟ್ರಸ್ಟಿ ಸ್ಟೀವನ್ ಪಿಂಟೋ, ಶ್ರೀ ಗಣೇಶ್ ಸೇವಾ ಟ್ರಸ್ಟ್ ನ ನಿರ್ದೇಶಕ ಮಹಮದ್ ಖಶೀರ್, ಹಾಗೂ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಮಕ್ಕಳು ಪೋಷಕರ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಸಿಬ್ಬಂದಿಗಳು ಪ್ರಾರ್ಥಿಸಿದರು. ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಮುಖ್ಯೋಪಾಧ್ಯಾಯಿನಿ ಮಲ್ಲಿಕಾ ಸ್ವಾಗತಿಸಿದರು. ರುಬೀನಾ ನಿರೂಪಿಸಿ, ಅಕ್ಷತಾ ಧನ್ಯವಾದವಿತ್ತರು.

Leave a Comment

error: Content is protected !!