23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ

ಉಜಿರೆ: ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದ ಟ್ರಸ್ಟಿ ಸಿಬ್ಬಂದಿಗಳು ಮತ್ತು ವಿಶೇಷ ವಿದ್ಯಾರ್ಥಿಗಳಿಗಾಗಿ ಕ್ರಿಸ್ಮಸ್ ಆಚರಣೆಯು ಡಿ.18 ರಂದು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹೋಲಿ ರೆಡಿಮರ್ ಚರ್ಚ್ ನ ವಂದನೀಯ ಫಾದರ್ ವಾಲ್ಟರ್ ಡಿ ಮೆಲ್ಲೋ ಉದ್ಘಾಟಿಸಿ, ಶುಭಹಾರೈಸಿದರು.

ಅಧಕ್ಷತೆಯನ್ನು ಗಣೇಶ್ ಸೇವಾ ಟ್ರಸ್ಟ್ ನ ಅಧ್ಯಕ್ಷ ಮಹಾಬಲ ಮಾರ್ಲಿ ವಹಿಸಿದರು.

ಮುಖ್ಯ ಅತಿಥಿಗಳಾಗಿ ಉಜಿರೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಉಷಾ ಕಿರಣ್ , ಮಡಂತ್ಯಾರು ಮಸೀದಿಯ ಧರ್ಮಗುರುಗಳು ಅಬ್ದುಲ್ ರಝಾಕ್ ಹಾಸಿಮ್, ಉಜಿರೆ ಡೆಂಟಲ್ ಕ್ಲಿನಿಕ್ ಡಾ| ದಯಾಕರ, ದಾನಿಗಳು ಮಾಕ್ಸಿ ವಿ ಅಚಾರ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶ್ರೀ ಗಣೇಶ್ ಸೇವಾ ಟ್ರಸ್ಟ್ ನ ಜತೆ ಕಾರ್ಯದರ್ಶಿ ಪ್ರೊ. ರಾಧಾಕೃಷ್ಣ, ಗೌರವ ಸಲಹೆಗಾರ ಡಾ| ಪ್ರಮೋದ್ ಆರ್ ನಾಯಕ್, ಆಯೋಜಕರಾದ ರೋಶನ್ ಸಿಕ್ವೇರಾ, ಶ್ರೀ ಗಣೇಶ್ ಸೇವಾ ಟ್ರಸ್ಟ್ ನ ಖಜಾಂಚಿ ಜಗದೀಶ್ ಶೆಟ್ಟಿ, ಶ್ರೀ ಗಣೇಶ್ ಸೇವಾ ಟ್ರಸ್ಟ್ ನ ಟ್ರಸ್ಟಿ ಸ್ಟೀವನ್ ಪಿಂಟೋ, ಶ್ರೀ ಗಣೇಶ್ ಸೇವಾ ಟ್ರಸ್ಟ್ ನ ನಿರ್ದೇಶಕ ಮಹಮದ್ ಖಶೀರ್, ಹಾಗೂ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಮಕ್ಕಳು ಪೋಷಕರ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಸಿಬ್ಬಂದಿಗಳು ಪ್ರಾರ್ಥಿಸಿದರು. ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಮುಖ್ಯೋಪಾಧ್ಯಾಯಿನಿ ಮಲ್ಲಿಕಾ ಸ್ವಾಗತಿಸಿದರು. ರುಬೀನಾ ನಿರೂಪಿಸಿ, ಅಕ್ಷತಾ ಧನ್ಯವಾದವಿತ್ತರು.

Related posts

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ

Suddi Udaya

ಕೊಕ್ಕಡ: ಪೃಥ್ವಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya

ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ ಆಚರಣೆ

Suddi Udaya

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!