September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ

ಉಜಿರೆ: ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದ ಟ್ರಸ್ಟಿ ಸಿಬ್ಬಂದಿಗಳು ಮತ್ತು ವಿಶೇಷ ವಿದ್ಯಾರ್ಥಿಗಳಿಗಾಗಿ ಕ್ರಿಸ್ಮಸ್ ಆಚರಣೆಯು ಡಿ.18 ರಂದು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹೋಲಿ ರೆಡಿಮರ್ ಚರ್ಚ್ ನ ವಂದನೀಯ ಫಾದರ್ ವಾಲ್ಟರ್ ಡಿ ಮೆಲ್ಲೋ ಉದ್ಘಾಟಿಸಿ, ಶುಭಹಾರೈಸಿದರು.

ಅಧಕ್ಷತೆಯನ್ನು ಗಣೇಶ್ ಸೇವಾ ಟ್ರಸ್ಟ್ ನ ಅಧ್ಯಕ್ಷ ಮಹಾಬಲ ಮಾರ್ಲಿ ವಹಿಸಿದರು.

ಮುಖ್ಯ ಅತಿಥಿಗಳಾಗಿ ಉಜಿರೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಉಷಾ ಕಿರಣ್ , ಮಡಂತ್ಯಾರು ಮಸೀದಿಯ ಧರ್ಮಗುರುಗಳು ಅಬ್ದುಲ್ ರಝಾಕ್ ಹಾಸಿಮ್, ಉಜಿರೆ ಡೆಂಟಲ್ ಕ್ಲಿನಿಕ್ ಡಾ| ದಯಾಕರ, ದಾನಿಗಳು ಮಾಕ್ಸಿ ವಿ ಅಚಾರ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶ್ರೀ ಗಣೇಶ್ ಸೇವಾ ಟ್ರಸ್ಟ್ ನ ಜತೆ ಕಾರ್ಯದರ್ಶಿ ಪ್ರೊ. ರಾಧಾಕೃಷ್ಣ, ಗೌರವ ಸಲಹೆಗಾರ ಡಾ| ಪ್ರಮೋದ್ ಆರ್ ನಾಯಕ್, ಆಯೋಜಕರಾದ ರೋಶನ್ ಸಿಕ್ವೇರಾ, ಶ್ರೀ ಗಣೇಶ್ ಸೇವಾ ಟ್ರಸ್ಟ್ ನ ಖಜಾಂಚಿ ಜಗದೀಶ್ ಶೆಟ್ಟಿ, ಶ್ರೀ ಗಣೇಶ್ ಸೇವಾ ಟ್ರಸ್ಟ್ ನ ಟ್ರಸ್ಟಿ ಸ್ಟೀವನ್ ಪಿಂಟೋ, ಶ್ರೀ ಗಣೇಶ್ ಸೇವಾ ಟ್ರಸ್ಟ್ ನ ನಿರ್ದೇಶಕ ಮಹಮದ್ ಖಶೀರ್, ಹಾಗೂ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಮಕ್ಕಳು ಪೋಷಕರ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಸಿಬ್ಬಂದಿಗಳು ಪ್ರಾರ್ಥಿಸಿದರು. ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ಮುಖ್ಯೋಪಾಧ್ಯಾಯಿನಿ ಮಲ್ಲಿಕಾ ಸ್ವಾಗತಿಸಿದರು. ರುಬೀನಾ ನಿರೂಪಿಸಿ, ಅಕ್ಷತಾ ಧನ್ಯವಾದವಿತ್ತರು.

Related posts

ವಿಧಾನ ಸಭಾ ಚುನಾವಣೆ:241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ.ಗಳ ಸಭೆ

Suddi Udaya

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್ : ರಕ್ಷಿತ್ ಶಿವರಾಂ

Suddi Udaya

ಮಲವಂತಿಗೆ: ಪಾಮಾಜಿ -ಕೊಲ್ಲಿ ರಸ್ತೆಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಮಚ್ಚಿನ: ಕುದ್ರಡ್ಕ ಭಜನೋತ್ಸವ-2026 ಕಾರ್ಯಕ್ರಮ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಸೆ.13, 14 : ವಾಣಿ ಕಾಲೇಜಿನಲ್ಲಿ ತುಳು ಸಾಹಿತ್ಯ ರಚನಾ ಕಮ್ಮಟ

Suddi Udaya
error: Content is protected !!