25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಅಶಕ್ತ ಕುಟುಂಬಕ್ಕೆ ಆರ್ಥಿಕ ನೆರವು,ಮನೆ ಹಸ್ತಾಂತರ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ಪದಪ್ರದಾನ ಸಮಾರಂಭವು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಭವನದಲ್ಲಿ ನಡೆಯಿತು.

ಪದಪ್ರದಾನ ಸಮಾರಂಭವನ್ನು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ ಉದ್ಘಾಟಿಸಿ ಶುಭಕೋರಿದರು.ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ‌ ಅಧ್ಯಕ್ಷ ರಾಜೇಶ್ ಬಿ ಅವರು ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಅಶ್ವಥ್ ಕುಮಾರ ರ ,ಕಾರ್ಯದರ್ಶಿ ಸುನೀಲ್ ಕುಮಾರ್ ಕನ್ಯಾಡಿ ಇವರು ಯುವವಾಹಿನಿ ಘಟಕದ ನೂತನ ಅಧ್ಯಕ್ಷ ಸದಾಶಿವ ಪೂಜಾರಿ ಊರ ಹಾಗೂ ತಂಡಕ್ಕೆ ಅಧಿಕಾರ ಹಸ್ತಾಂತರಿಸಿ ಶುಭಕೋರಿದರು.ಯುವ ಸಾಹಿತಿ ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿ ನಿಯೋಜಿತ ಅಧ್ಯಕ್ಷ ಹರೀಶ್ ಕೆ ಪೂಜಾರಿ ಬೈಲಬರಿ,ಕಾರ್ಯದರ್ಶಿ ಯಶೋಧರ್ ಮುಂಡಾಜೆ ಉಪಸ್ಥಿತರಿದ್ದರು.

ಕಾರ್ಯದರ್ಶಿ ಸುನೀಲ್ ಕನ್ಯಾಡಿ ತಮ್ಮ ಅವಧಿಯಲ್ಲಿ ಮಾಡಿದ ಸೇವಾ ಕಾರ್ಯಗಳ ವಿವರವನ್ನು ವೇದಿಕೆಯ ಮುಂದಿಟ್ಟರು.ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಾದ ಸಿಎ ನಿರೀಕ್ಷಾ ಎನ್ ನಾವರ,ಕ್ರೀಡಾ ಸಾಧಕ ಶುಶಾಂತ್ ಎಸ್ ಪೂಜಾರಿ ಅವರನ್ನು ಗೌರವಿಸಲಾಯಿತು. ಸುಂದರ ಪೂಜಾರಿ, ಗಿರಿಜಾ, ಪ್ರದ್ವಿರಾಣಿ ಇವರಿಗೆ ಸಾಂತ್ವನ ನಿಧಿ ಹಸ್ತಾಂತರಿಸಲಾಯಿತು. ಆಸರೆಗೊಂದು ಸೂರು ಯೋಜನೆಯಡಿ ಶ್ರೀಮತಿ ಗುಲಾಬಿ ಒಡಿಲ್ನಾಳ ಅವರ ಮನೆಯನ್ನು ದುರಸ್ತಿಗೊಳಿಸಿ ಅವರಿಗೆ ಹಸ್ತಾಂತರಿಸಲಾಯಿತು.

Related posts

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

Suddi Udaya

ನಾರಾವಿ ಮತ್ತು ಕುತ್ಲೂರು ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಬೆಳ್ತಂಗಡಿ ಘಟಕ ತೃತೀಯ ಸ್ಥಾನ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya

ಪ್ರವೀಣ್ ಮದ್ದಡ್ಕ ಫೇಸ್‌ಬುಕ್ ಖಾತೆಯಿಂದ ದಲಿತ ಜನಾಂಗವನ್ನು ಅವಮಾನಿಸಿ ಜಾತಿ ನಿಂದನೆ ಪೋಸ್ಟ್: ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದಲಿತ ಸಂಘರ್ಷ ಸಮಿತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಮಾಲಾಡಿಯಲ್ಲಿ ಮನೆ ಕಳ್ಳತಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನ ಸೆರೆ

Suddi Udaya
error: Content is protected !!