ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

Suddi Udaya

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾ ದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವದ ಮಹಾ ಅನ್ನದಾನದ ಕೂಪನ್ ಬಿಡುಗಡೆ ಕಾರ್ಯಕ್ರಮವು ಡಿ.19ರಂದು ಜರುಗಿತು.

ಮಾಜಿ ಶಾಸಕ ವಸಂತ ಬಂಗೇರ ಕೂಪನ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಧನಂಜಯ ರಾವ್, ಪ್ರಧಾನ ಕಾರ್ಯದರ್ಶಿ ದಾಸಪ್ಪ ಗೌಡ ಕಾಂಜಾನು, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರುಗಳಾದ ವಾಸುದೇವ ರಾವ್ ಕಕ್ಕೆನೇಜಿ ಹಾಗೂ ಮಂಜುನಾಥ್ ಕಾಮತ್, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ದಿನೇಶ್ ಗೌಡ ದಿಡುಪೆ, ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಆಡಳಿತಾಧಿಕಾರಿ ಮೋಹನ್ ಬಂಗೇರ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವ ಪದಾಧಿಕಾರಿಗಳು, ಊರ-ಪರವೂರ ಭಕ್ತಾಧಿಗಳು ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಘಟನಾ ಕಾರ್ಯದರ್ಶಿ ವಿನಯಚಂದ್ರ ಸೇನರಬೆಟ್ಟು ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಧನಂಜಯ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Leave a Comment

error: Content is protected !!