23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

ಬೆಳ್ತಂಗಡಿ : ಪಾನಮತ್ತನಾಗಿ ಪತ್ನಿ ಹಾಗೂ ಮಗಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆರೋಪಿಯನ್ನು ಧರ್ಮಸ್ಥಳ ಪೊಲೀಸ್ ಬಂಧಿಸಿದ ಘಟನೆ ವರದಿಯಾಗಿದೆ.ಘಟನೆ ಶಿಶಿಲದಲ್ಲಿ ಸಂಭವಿಸಿದ್ದು ಸ್ಥಳೀಯರ ಸಹಕಾರದೊಂದಿಗೆ ಹಲ್ಲೆಗೆ ಒಳಗಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿಶಿಲ ಗ್ರಾಮದ ಕೋಟೆಬಾಗಿಲು ನಿವಾಸಿ ಸುರೇಶ್ ಎಂಬಾತ ಬಂಧನಕ್ಕೆ ಒಳಗಾದ ಆರೋಪಿ.ಸೋಮವಾರ ತಡರಾತ್ರಿ ಪಾನಮತ್ತನಾಗಿ ಮನೆಗೆ ಬಂದ ಆರೋಪಿ ಸುರೇಶ ಪತ್ನಿ ಮೋಹಿನಿ ಹಾಗೂ ಮಗಳ ಮೇಲೆ ಹಲ್ಲೆ ನಡೆಸಿದ್ದಾನೆ, ಮಹಿಳೆಯ ಮುಖದ ಮೇಲೆ ಗಂಭೀರ ಗಾಯಗಳಾಗಿದ್ದು ಒಂದು ಕಣ್ಣಿಗೂ ಸಂಪೂರ್ಣ ಹಾನಿಯಾಗಿದೆ, ಮಗಳ ತಲೆಗೂ ಈತ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಹಲ್ಲೆಗೆ ಒಳಗಾದ ತಾಯಿ ಹಾಗೂ ಮಗಳು ಹೆದರಿ ಮನೆಯಿಂದ ಓಡಿದ್ದಾರೆ. ಮಗಳು ನೆರೆಮನೆಗ ಬಂದು ವಿಷಯ ತಿಳಿಸಿದಾಗಲೇ ಇತರರಿಗೆ ಮಾಹಿತಿ ಲಭಿಸಿದ್ದು ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ರಾತ್ರಿ ಹುಡುಕಾಟ ನಡೆಸಿದರೂ ಗಂಬೀರವಾಗಿ ಗಾಯಗೊಂಡಿದ್ದ ಪತ್ನಿ ಪತ್ತೆಯಾಗಿರಲಿಲ್ಲ ಮಂಗಳವಾರ ಬೆಳಿಗ್ಗೆ ಹುಡುಕಾಟ ನಡೆಸಿದಾಗ ಸ್ಥಳೀಯ ಮನೆಯೊಂದರೆ ಕೊಟ್ಟಿಗೆಯಲ್ಲಿ ಅಸ್ವಸ್ಥರಾಗಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಯ ಬಂಧನ: ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಬಳಿಕ ಅಲ್ಲಿಂದ ಪರಾರಿಯಾಗಿದ್ದ ಆರೋಪಿ ಸುರೇಶ್ ಗೌಡ ನನ್ನು ಧರ್ಮಸ್ಥಳ ಪೊಲೀಸ್ ಠಾಣಾ ಪಿ.ಎಸ್.ಐ ಅನೀಲ್ ಕುಮಾರ್.ಡಿ, ಪಿ,ಎಸ್,ಐ ಸಮರ್ಥ ರವೀಂದ್ರ ಗಾಣಿಗೇರ ಮತ್ತು ಸಿಬ್ಬಂದಿಗಳಾದ ಹೆಚ್.ಸಿ ಶಶಿಧರ , ಪಿ.ಸಿ ಮಲ್ಲಿಕಾರ್ಜುನ ರವರುಗಳ ತಂಡವು, ಬೆಳ್ತಂಗಡಿ ಶಿಶಿಲ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

Related posts

ಉಜಿರೆ ಗುರಿಪಳ್ಳ -ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ

Suddi Udaya

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ರಕ್ಷಿತ್ ಪಣೆಕ್ಕರ

Suddi Udaya

ಲಾಯಿಲ: ಗಂಗಮ್ಮ ಪೂಜಾರಿ ನಿಧನ

Suddi Udaya
error: Content is protected !!