27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾ ದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವದ ಮಹಾ ಅನ್ನದಾನದ ಕೂಪನ್ ಬಿಡುಗಡೆ ಕಾರ್ಯಕ್ರಮವು ಡಿ.19ರಂದು ಜರುಗಿತು.

ಮಾಜಿ ಶಾಸಕ ವಸಂತ ಬಂಗೇರ ಕೂಪನ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಧನಂಜಯ ರಾವ್, ಪ್ರಧಾನ ಕಾರ್ಯದರ್ಶಿ ದಾಸಪ್ಪ ಗೌಡ ಕಾಂಜಾನು, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರುಗಳಾದ ವಾಸುದೇವ ರಾವ್ ಕಕ್ಕೆನೇಜಿ ಹಾಗೂ ಮಂಜುನಾಥ್ ಕಾಮತ್, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ದಿನೇಶ್ ಗೌಡ ದಿಡುಪೆ, ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಆಡಳಿತಾಧಿಕಾರಿ ಮೋಹನ್ ಬಂಗೇರ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವ ಪದಾಧಿಕಾರಿಗಳು, ಊರ-ಪರವೂರ ಭಕ್ತಾಧಿಗಳು ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಘಟನಾ ಕಾರ್ಯದರ್ಶಿ ವಿನಯಚಂದ್ರ ಸೇನರಬೆಟ್ಟು ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಧನಂಜಯ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya

ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಮೂಡುಬಿದಿರೆಗೆ ರಾಜ್ಯ ಮಟ್ಟದಲ್ಲಿ ಎರಡನೇ ಮತ್ತು ನಾಲ್ಕನೇ ರ‍್ಯಾಂಕ್‌ಗಳು

Suddi Udaya

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

Suddi Udaya

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

Suddi Udaya

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

Suddi Udaya
error: Content is protected !!