September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

ಬೆಳ್ತಂಗಡಿ : ಪಾನಮತ್ತನಾಗಿ ಪತ್ನಿ ಹಾಗೂ ಮಗಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆರೋಪಿಯನ್ನು ಧರ್ಮಸ್ಥಳ ಪೊಲೀಸ್ ಬಂಧಿಸಿದ ಘಟನೆ ವರದಿಯಾಗಿದೆ.ಘಟನೆ ಶಿಶಿಲದಲ್ಲಿ ಸಂಭವಿಸಿದ್ದು ಸ್ಥಳೀಯರ ಸಹಕಾರದೊಂದಿಗೆ ಹಲ್ಲೆಗೆ ಒಳಗಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿಶಿಲ ಗ್ರಾಮದ ಕೋಟೆಬಾಗಿಲು ನಿವಾಸಿ ಸುರೇಶ್ ಎಂಬಾತ ಬಂಧನಕ್ಕೆ ಒಳಗಾದ ಆರೋಪಿ.ಸೋಮವಾರ ತಡರಾತ್ರಿ ಪಾನಮತ್ತನಾಗಿ ಮನೆಗೆ ಬಂದ ಆರೋಪಿ ಸುರೇಶ ಪತ್ನಿ ಮೋಹಿನಿ ಹಾಗೂ ಮಗಳ ಮೇಲೆ ಹಲ್ಲೆ ನಡೆಸಿದ್ದಾನೆ, ಮಹಿಳೆಯ ಮುಖದ ಮೇಲೆ ಗಂಭೀರ ಗಾಯಗಳಾಗಿದ್ದು ಒಂದು ಕಣ್ಣಿಗೂ ಸಂಪೂರ್ಣ ಹಾನಿಯಾಗಿದೆ, ಮಗಳ ತಲೆಗೂ ಈತ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಹಲ್ಲೆಗೆ ಒಳಗಾದ ತಾಯಿ ಹಾಗೂ ಮಗಳು ಹೆದರಿ ಮನೆಯಿಂದ ಓಡಿದ್ದಾರೆ. ಮಗಳು ನೆರೆಮನೆಗ ಬಂದು ವಿಷಯ ತಿಳಿಸಿದಾಗಲೇ ಇತರರಿಗೆ ಮಾಹಿತಿ ಲಭಿಸಿದ್ದು ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ರಾತ್ರಿ ಹುಡುಕಾಟ ನಡೆಸಿದರೂ ಗಂಬೀರವಾಗಿ ಗಾಯಗೊಂಡಿದ್ದ ಪತ್ನಿ ಪತ್ತೆಯಾಗಿರಲಿಲ್ಲ ಮಂಗಳವಾರ ಬೆಳಿಗ್ಗೆ ಹುಡುಕಾಟ ನಡೆಸಿದಾಗ ಸ್ಥಳೀಯ ಮನೆಯೊಂದರೆ ಕೊಟ್ಟಿಗೆಯಲ್ಲಿ ಅಸ್ವಸ್ಥರಾಗಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಯ ಬಂಧನ: ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಬಳಿಕ ಅಲ್ಲಿಂದ ಪರಾರಿಯಾಗಿದ್ದ ಆರೋಪಿ ಸುರೇಶ್ ಗೌಡ ನನ್ನು ಧರ್ಮಸ್ಥಳ ಪೊಲೀಸ್ ಠಾಣಾ ಪಿ.ಎಸ್.ಐ ಅನೀಲ್ ಕುಮಾರ್.ಡಿ, ಪಿ,ಎಸ್,ಐ ಸಮರ್ಥ ರವೀಂದ್ರ ಗಾಣಿಗೇರ ಮತ್ತು ಸಿಬ್ಬಂದಿಗಳಾದ ಹೆಚ್.ಸಿ ಶಶಿಧರ , ಪಿ.ಸಿ ಮಲ್ಲಿಕಾರ್ಜುನ ರವರುಗಳ ತಂಡವು, ಬೆಳ್ತಂಗಡಿ ಶಿಶಿಲ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

Related posts

ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸ್ವಯಂಸೇವಕರಾಗಿ ಭಾಗಿ

Suddi Udaya

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಗುರು ಪೂಜೆ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಕೊಕ್ಕಡ: ಮನೆಯಲ್ಲಿಟ್ಟ ಚಿನ್ನಾಭರಣ ಕಳ್ಳತನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಳಾಲು ಕಾರ್ಯಕ್ಷೇತ್ರದ ಸದಸ್ಯ ಬಾಬು ಗೌಡ ರವರಿಗೆ ಊರುಗೋಲು ವಿತರಣೆ

Suddi Udaya
error: Content is protected !!