25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಾರ್ಷಿಕೋತ್ಸವ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ ಜರಗಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳಾಲು ಗ್ರಾಮ ಪಂಚಾಯತ್ತಿನ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡರವರು ಆಗಮಿಸಿದ್ದು, ಕ್ರೀಡೆ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ವಿಭಾಗದ ಬಹುಮಾನ ವಿತರಣೆಗಳನ್ನು ನೆರವೇರಿಸಿ ಮಾತನಾಡುತ್ತಾ, ಬಹುಮಾನ ಸಾಂಕೇತಿಕವಾಗಿದ್ದು ಈ ಮೂಲಕ ನಮ್ಮನ್ನು ನಾವು ಅರಿತುಕೊಂಡು ಮುಂದುವರಿಯಲು, ಇನ್ನಷ್ಟು ಸಾಧನೆಗೆ ಪ್ರೇರಣೆ ನೀಡುವ ಸಂದರ್ಭವಾಗಿದೆ. ಶಿಕ್ಷಣ ಎಂದರೆ ಕೇವಲ ಅಂಕ ಸಾಧನೆಯಲ್ಲ. ಜೊತೆಗೆ ಗುಣವನ್ನು ರೂಢಿಸಿಕೊಳ್ಳಬೇಕಾದ್ದೂ ಅದರ ಉದ್ದೇಶವಾಗಿದೆ. ಬೆಳಾಲು ಪ್ರೌಢಶಾಲೆಯು ಈ ಹಿನ್ನೆಲೆಯಲ್ಲಿ ಉತ್ತಮ ಸಂಸ್ಥೆಯಾಗಿದೆ ಎಂದು ಅಭಿಪ್ರಾಯಪಟ್ಟರು.


ಅತಿಥಿಗಳಾದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ ಗೌಡ ಕೊಲ್ಲಿಮಾರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ ಕನಿಕ್ಕಿಲರವರು ಶುಭಕೋರಿದರು. ವೇದಿಕೆಯಲ್ಲಿ ವಿದ್ಯಾರ್ಥಿ ನಾಯಕಿ ಕು. ಅಮೂಲ್ಯರವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶ್ರೀಧ ಮಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಬಿ. ಸೋಮಶೇಖರ ಶೆಟ್ಟಿಯವರು ‘ನವ್ಯಜ್ಯೋತಿ’ ಶಾಲಾ ಹಸ್ತಪ್ರತಿಯನ್ನು ಬಿಡುಗಡೆಗೊಳಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಸ್ವಾಗತಿಸಿ ವಿದ್ಯಾರ್ಥಿ ಕು. ಶರಣ್ಯ ವಂದಿಸಿದರು. ವಿವಿಧ ಸ್ಪರ್ಧೆಗಳ ಬಹುಮಾನ ವಿತರಣಾ ಜವಾಬ್ದಾರಿಯನ್ನು ಶಿಕ್ಷಕರಾದ ಕೃಷ್ಣಾನಂದ ಮತ್ತು ಗಣೇಶ್ ರವರು ನಿರ್ವಹಿಸಿದರು, ಕಾರ್ಯಕ್ರಮವನ್ನು ಜಗದೀಶ್ ರವರು ನಿರೂಪಿಸಿದರು.

ಸಭೆಯ ನಂತರ ವಿದ್ಯಾರ್ಥಿಗಳಿಂದ ವಿವಿಧ ಕಲಾ ಕಾರ್ಯಕ್ರಮಗಳು ಮತ್ತು ಶ್ರೀಕೃಷ್ಣಕಾರುಣ್ಯ ಯಕ್ಷಗಾನ ಬಯಲಾಟ ಜರಗಿತು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮ : ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಧರ್ಮಸ್ಥಳದಲ್ಲಿ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ವಾರ್ಷಿಕ ಸಮಾವೇಶದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ

Suddi Udaya

ಬಹರೈನ್, ದುಬೈಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿಯಲ್ಲಿ ಬ್ರಹ್ಮಾನಂದ ಶ್ರೀಗಳಿಂದ ಆಶೀರ್ವಚನ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya

ಬೆಳಾಲು: ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಅಂಗವಾಗಿ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!