30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸೂಚನೆ: ಇ-ಕೆವೈಸಿ ಮಾಡಲು ಡಿ.31 ಕೊನೆಯ ದಿನ

ಬೆಳ್ತಂಗಡಿ: ಕೇಂದ್ರ ಸರ್ಕಾರ ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದ್ದು, ಎಲ್‌ಪಿಜಿ ಸಬ್ಸಿಡಿ ಪಡೆಯಲು ಪ್ರತಿಯೊಬ್ಬರೂ ಡಿಸೆಂಬರ್‌ 31ರೊಳಗೆ ಇ-ಕೆವೈಸಿ (E-Kyc)ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ.

ಎಲ್‌ಪಿಜಿ ಸಬ್ಸಿಡಿ ಪಡೆಯಲು ಪ್ರತಿಯೊಬ್ಬರೂ ಇ-ಕೆವೈಸಿ ಮಾಡಿಸಲು ಕೇಂದ್ರ ಸೂಚನೆ ನೀಡಿದ್ದು, ಇ-ಕೆವೈಸಿ ಮಾಡದಿದ್ದರೆ ಸಬ್ಸಿಡಿಯನ್ನು ರದ್ದುಗೊಳಿಸುವ ಎಚ್ಚರಿಕೆ ನೀಡಿದೆ. ಹೀಗಾಗಿ, ಎಲ್‌ಪಿಜಿ ಸಂಪರ್ಕ ಹೊಂದಿರುವ ಎಲ್ಲ ಫಲಾನುಭವಿಗಳು ಈ ವರ್ಷದ ಡಿಸೆಂಬರ್ 31ರೊಳಗೆ ಗ್ಯಾಸ್ ಸಂಪರ್ಕ ಇದ್ದವರು ತಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಪುಸ್ತಕ ಮತ್ತು ಗ್ಯಾಸ್ ಏಜೆನ್ಸಿ ನೀಡಿದ ಪುಸ್ತಕವನ್ನು ತಮ್ಮ ಗ್ಯಾಸ್ ನೀಡುವ ಎಜೆನ್ಸಿ ಬಳಿ ಹೋಗಿ ಇ-ಕೆವೈಸಿ ಮಾಡಿಸತಕ್ಕದ್ದು. ಇ-ಕೆವೈಸಿ ಮಾಡಲು ಗ್ರಾಹಕರು ಬಳಸುತ್ತಿರುವ ಗ್ಯಾಸ್ ಸಿಲಿಂಡರ್ ಏಜೆನ್ಸಿಯನ್ನು ಸಂಪರ್ಕಿಸಬೇಕಾಗುತ್ತದೆ. ಇಲ್ಲದೇ ಹೋದರೆ, ಗ್ರಾಹಕರಿಗೆ ಲಭ್ಯವಿರುವ ಸಬ್ಸಿಡಿ ಮರುಪಾವತಿಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Related posts

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಯಾತ್ರಿ ನಿವಾಸ: ನ. 23 ರಂದು ಯಾತ್ರಿ ನಿವಾಸದ ಶಿಲಾನ್ಯಾಸ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

Suddi Udaya

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅ.8 ರಿಂದ ಅ.24 ರವರೆಗೆ ದಸರಾ ರಜೆ

Suddi Udaya
error: Content is protected !!