July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸೂಚನೆ: ಇ-ಕೆವೈಸಿ ಮಾಡಲು ಡಿ.31 ಕೊನೆಯ ದಿನ

ಬೆಳ್ತಂಗಡಿ: ಕೇಂದ್ರ ಸರ್ಕಾರ ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದ್ದು, ಎಲ್‌ಪಿಜಿ ಸಬ್ಸಿಡಿ ಪಡೆಯಲು ಪ್ರತಿಯೊಬ್ಬರೂ ಡಿಸೆಂಬರ್‌ 31ರೊಳಗೆ ಇ-ಕೆವೈಸಿ (E-Kyc)ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ.

ಎಲ್‌ಪಿಜಿ ಸಬ್ಸಿಡಿ ಪಡೆಯಲು ಪ್ರತಿಯೊಬ್ಬರೂ ಇ-ಕೆವೈಸಿ ಮಾಡಿಸಲು ಕೇಂದ್ರ ಸೂಚನೆ ನೀಡಿದ್ದು, ಇ-ಕೆವೈಸಿ ಮಾಡದಿದ್ದರೆ ಸಬ್ಸಿಡಿಯನ್ನು ರದ್ದುಗೊಳಿಸುವ ಎಚ್ಚರಿಕೆ ನೀಡಿದೆ. ಹೀಗಾಗಿ, ಎಲ್‌ಪಿಜಿ ಸಂಪರ್ಕ ಹೊಂದಿರುವ ಎಲ್ಲ ಫಲಾನುಭವಿಗಳು ಈ ವರ್ಷದ ಡಿಸೆಂಬರ್ 31ರೊಳಗೆ ಗ್ಯಾಸ್ ಸಂಪರ್ಕ ಇದ್ದವರು ತಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಪುಸ್ತಕ ಮತ್ತು ಗ್ಯಾಸ್ ಏಜೆನ್ಸಿ ನೀಡಿದ ಪುಸ್ತಕವನ್ನು ತಮ್ಮ ಗ್ಯಾಸ್ ನೀಡುವ ಎಜೆನ್ಸಿ ಬಳಿ ಹೋಗಿ ಇ-ಕೆವೈಸಿ ಮಾಡಿಸತಕ್ಕದ್ದು. ಇ-ಕೆವೈಸಿ ಮಾಡಲು ಗ್ರಾಹಕರು ಬಳಸುತ್ತಿರುವ ಗ್ಯಾಸ್ ಸಿಲಿಂಡರ್ ಏಜೆನ್ಸಿಯನ್ನು ಸಂಪರ್ಕಿಸಬೇಕಾಗುತ್ತದೆ. ಇಲ್ಲದೇ ಹೋದರೆ, ಗ್ರಾಹಕರಿಗೆ ಲಭ್ಯವಿರುವ ಸಬ್ಸಿಡಿ ಮರುಪಾವತಿಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Related posts

ಎಸ್‌ಜಿಎಫ್‌ಐ (SGFI) ರಾಷ್ಟ್ರೀಯ ಕಬಡ್ಡಿ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಭಾಗಿ

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಫೈರ್ ಸೇಫ್ಟಿ ಅಭಿಯಾನ್’ ಕಾರ್ಯಾಗಾರ

Suddi Udaya

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya

ಕೃಷಿಕರ ಒಕ್ಕಲು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ವಿರುದ್ಧ ಸರಕಾರ ಕಠಿಣ ಕ್ರಮಕೈಗೊಳ್ಳಬೇಕು : ಮೋಹನ್ ಗೌಡ

Suddi Udaya

ಶಿಶಿಲ: ಕೋಳಿ ತ್ಯಾಜ್ಯ ಹಾಕುವ ವಿಚಾರದಲ್ಲಿ ದೂರು ನೀಡಿದ ಹಿನ್ನಲೆ: ಸ್ಥಳಕ್ಕೆ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭೇಟಿ, ಪರಿಶೀಲನೆ

Suddi Udaya
error: Content is protected !!