25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸೂಚನೆ: ಇ-ಕೆವೈಸಿ ಮಾಡಲು ಡಿ.31 ಕೊನೆಯ ದಿನ

ಬೆಳ್ತಂಗಡಿ: ಕೇಂದ್ರ ಸರ್ಕಾರ ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದ್ದು, ಎಲ್‌ಪಿಜಿ ಸಬ್ಸಿಡಿ ಪಡೆಯಲು ಪ್ರತಿಯೊಬ್ಬರೂ ಡಿಸೆಂಬರ್‌ 31ರೊಳಗೆ ಇ-ಕೆವೈಸಿ (E-Kyc)ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ.

ಎಲ್‌ಪಿಜಿ ಸಬ್ಸಿಡಿ ಪಡೆಯಲು ಪ್ರತಿಯೊಬ್ಬರೂ ಇ-ಕೆವೈಸಿ ಮಾಡಿಸಲು ಕೇಂದ್ರ ಸೂಚನೆ ನೀಡಿದ್ದು, ಇ-ಕೆವೈಸಿ ಮಾಡದಿದ್ದರೆ ಸಬ್ಸಿಡಿಯನ್ನು ರದ್ದುಗೊಳಿಸುವ ಎಚ್ಚರಿಕೆ ನೀಡಿದೆ. ಹೀಗಾಗಿ, ಎಲ್‌ಪಿಜಿ ಸಂಪರ್ಕ ಹೊಂದಿರುವ ಎಲ್ಲ ಫಲಾನುಭವಿಗಳು ಈ ವರ್ಷದ ಡಿಸೆಂಬರ್ 31ರೊಳಗೆ ಗ್ಯಾಸ್ ಸಂಪರ್ಕ ಇದ್ದವರು ತಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಪುಸ್ತಕ ಮತ್ತು ಗ್ಯಾಸ್ ಏಜೆನ್ಸಿ ನೀಡಿದ ಪುಸ್ತಕವನ್ನು ತಮ್ಮ ಗ್ಯಾಸ್ ನೀಡುವ ಎಜೆನ್ಸಿ ಬಳಿ ಹೋಗಿ ಇ-ಕೆವೈಸಿ ಮಾಡಿಸತಕ್ಕದ್ದು. ಇ-ಕೆವೈಸಿ ಮಾಡಲು ಗ್ರಾಹಕರು ಬಳಸುತ್ತಿರುವ ಗ್ಯಾಸ್ ಸಿಲಿಂಡರ್ ಏಜೆನ್ಸಿಯನ್ನು ಸಂಪರ್ಕಿಸಬೇಕಾಗುತ್ತದೆ. ಇಲ್ಲದೇ ಹೋದರೆ, ಗ್ರಾಹಕರಿಗೆ ಲಭ್ಯವಿರುವ ಸಬ್ಸಿಡಿ ಮರುಪಾವತಿಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಲಯನ್ ಎಂ. ಜಿ. ಶೆಟ್ಟಿಯವರಿಗೆ ನುಡಿನಮನ

Suddi Udaya

ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಉದಯೋನ್ಮುಖ ಪ್ರತಿಭೆ ಬಹುಮಾನ

Suddi Udaya

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

Suddi Udaya
error: Content is protected !!