ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸೂಚನೆ: ಇ-ಕೆವೈಸಿ ಮಾಡಲು ಡಿ.31 ಕೊನೆಯ ದಿನ

ಬೆಳ್ತಂಗಡಿ: ಕೇಂದ್ರ ಸರ್ಕಾರ ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದ್ದು, ಎಲ್‌ಪಿಜಿ ಸಬ್ಸಿಡಿ ಪಡೆಯಲು ಪ್ರತಿಯೊಬ್ಬರೂ ಡಿಸೆಂಬರ್‌ 31ರೊಳಗೆ ಇ-ಕೆವೈಸಿ (E-Kyc)ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ.

ಎಲ್‌ಪಿಜಿ ಸಬ್ಸಿಡಿ ಪಡೆಯಲು ಪ್ರತಿಯೊಬ್ಬರೂ ಇ-ಕೆವೈಸಿ ಮಾಡಿಸಲು ಕೇಂದ್ರ ಸೂಚನೆ ನೀಡಿದ್ದು, ಇ-ಕೆವೈಸಿ ಮಾಡದಿದ್ದರೆ ಸಬ್ಸಿಡಿಯನ್ನು ರದ್ದುಗೊಳಿಸುವ ಎಚ್ಚರಿಕೆ ನೀಡಿದೆ. ಹೀಗಾಗಿ, ಎಲ್‌ಪಿಜಿ ಸಂಪರ್ಕ ಹೊಂದಿರುವ ಎಲ್ಲ ಫಲಾನುಭವಿಗಳು ಈ ವರ್ಷದ ಡಿಸೆಂಬರ್ 31ರೊಳಗೆ ಗ್ಯಾಸ್ ಸಂಪರ್ಕ ಇದ್ದವರು ತಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಪುಸ್ತಕ ಮತ್ತು ಗ್ಯಾಸ್ ಏಜೆನ್ಸಿ ನೀಡಿದ ಪುಸ್ತಕವನ್ನು ತಮ್ಮ ಗ್ಯಾಸ್ ನೀಡುವ ಎಜೆನ್ಸಿ ಬಳಿ ಹೋಗಿ ಇ-ಕೆವೈಸಿ ಮಾಡಿಸತಕ್ಕದ್ದು. ಇ-ಕೆವೈಸಿ ಮಾಡಲು ಗ್ರಾಹಕರು ಬಳಸುತ್ತಿರುವ ಗ್ಯಾಸ್ ಸಿಲಿಂಡರ್ ಏಜೆನ್ಸಿಯನ್ನು ಸಂಪರ್ಕಿಸಬೇಕಾಗುತ್ತದೆ. ಇಲ್ಲದೇ ಹೋದರೆ, ಗ್ರಾಹಕರಿಗೆ ಲಭ್ಯವಿರುವ ಸಬ್ಸಿಡಿ ಮರುಪಾವತಿಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Related posts

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ರವರು ಭೇಟಿ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ರಾಕಿಂಗ್ ಸ್ಟಾರ್ ಯಶ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!