25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪತ್ನಿ-ಮಗಳ ಮೇಲೆ ಪತಿಯಿಂದ ಮಾರಾಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು: ಪೊಲೀಸರ ತನಿಖೆ

ಶಿಶಿಲ: ಇಲ್ಲಿಯ ಕೋಟೆ ಬಾಗಿಲು ನಿವಾಸಿ ಸುರೇಶ್ ಎಂಬವರು ಪತ್ನಿ, ಮಗಳಿಗೆ ಮಾರಣಾಂತಿಕ ಹಲ್ಲೆ ಮಾಡಿದ್ದು, ತೀವ್ರ ಗಾಯಗೊಂಡ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ ಘಟನೆ ಡಿ.18 ರಂದು ತಡರಾತ್ರಿ ಶಿಶಿಲ ಗ್ರಾಮದ ಕೋಟೆಬಾಗಿಲು ಎಂಬಲ್ಲಿ ನಡೆದಿದೆ.


ಕೋಟೆಬಾಗಿಲು ನಿವಾಸಿ ಸುರೇಶ್ ತನ್ನ ಪತ್ನಿಯ ಮುಖದ ಭಾಗಕ್ಕೆ ಕಚ್ಚಿ ಮಾಂಸ ಹೊರತೆಗೆದು ಕಣ್ಣಿಗೆ ಕೂಡ ಕೋಲಿನಿಂದ ಹೊಡೆದು ಎಡ ಭಾಗದ ಕಣ್ಣನ್ನು ಸಂಪೂರ್ಣ ಹಾನಿಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮಗಳಿಗೆ ತಲೆಯಭಾಗಕ್ಕೆ ಹೊಡೆದಿದ್ದು, ಪ್ರಾಣ ಭಯದಿಂದ ಇಬ್ಬರು ತಪ್ಪಿಸಿಕೊಂಡಿದ್ದು ಮಗಳು ನೆರೆಯ ಮನೆಗೆ ಬಂದು ವಿಷಯ ತಿಳಿಸಿದಾಗ ವಿಪತ್ತು ನಿರ್ವಹಣಾ ತಂಡ, ನೆರೆಹೊರೆಯವರು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು.

ಈ ಸಂದರ್ಭ ಪತಿ ಸುರೇಶ್‌ನ ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ ಪತ್ನಿ ಅಲ್ಲಿರಲಿಲ್ಲ. ಅವರಿಗಾಗಿ ರಾತ್ರಿ ಹುಡುಕಾಡಿದಾಗ ಅವರು ಎಲ್ಲಿಯೂ ಪತ್ತೆಯಾಗಲಿಲ್ಲ, ಮರುದಿನ ಬೆಳಿಗ್ಗೆ ಮತ್ತೆ ಹುಡುಕಾಡಿದಾಗ ಸ್ಥಳೀಯ ಮನೆಯವರ ಕೊಟ್ಟಿಗೆಯಲ್ಲಿ ಅವರು ತೀವ್ರ ಅಸ್ವಸ್ಥರಾಗಿ ಬಿದ್ದುಕೊಂಡಿರುವುದು ಕಂಡುಬಂದಿದ್ದು, ತಕ್ಷಣ ಸ್ಪಂದಿಸಿದ ಸ್ಥಳೀಯರು ಆಂಬ್ಯುಲೆನ್ಸ್ ಸಹಾಯದಿಂದ ಉಜಿರೆ ಖಾಸಗಿ ಆಸ್ಪತ್ರೆಗೆ ತಾಯಿ ಮತ್ತು ಮಗಳನ್ನು ದಾಖಲಿಸಿದ್ದಾರೆ.

ಧರ್ಮಸ್ಥಳ ಪೊಲೀಸರಿಗೆ ಈ ಪ್ರಕರಣದ ಕುರಿತು ಮಾಹಿತಿ ನೀಡಲಾಗಿದ್ದು, ಅವರು ಆಸ್ಪತ್ರೆಗೆ ತೆರಳಿ ಘಟನೆಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಶಿಶಿಲ ವಿಪತ್ತು ನಿರ್ವಹಣಾ ತಂಡದ ಗಿರಿಜಾ ಎಸ್. ಕೆದಿಲ್ಲಾಯ, ರಮೇಶ್ ಬೈರಕಟ್ಟ, ಗಾಯತ್ರಿ ಸೇವಾ ಪ್ರತಿನಿಧಿ, ರೂಪೇಶ್ ಬೈಪಾಡಿ, ರಾಧಕೃಷ್ಣ, ಕಿರಣ್, ವಿಮಲ, ಹಾಗೂ ಸ್ಥಳೀಯರು ಹುಡುಕಾಟಕ್ಕೆ ಹಾಗೂ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಸುರೇಶ್ ಪಾನಮತ್ತನಾಗಿ ಈ ರೀತಿ ವರ್ತಿಸಿದನೇ ಅಥವಾ ಬೇರೆ ಯಾವುದಾದರರೂ ಮಾದಕ ವಸ್ತು ಸೇವಿಸಿ ಈ ಕೃತ್ಯದಿಂದ ಎಸಗಿರಬಹುದೇ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಪಟ್ರಮೆ: ಪಾದೆಯಲ್ಲಿ ಧರೆ ಕುಸಿತ: ಮನೆಗೆ ಹಾನಿ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

Suddi Udaya

ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂ.ಎಸ್.

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಬಳಂಜ ಶ್ರೀ ಗಣೇಶೋತ್ಸವ ಪೂರ್ವಭಾವಿ ಸಭೆ, ವಿವಿಧ ಸಮಿತಿಗಳ‌ ರಚನೆ

Suddi Udaya
error: Content is protected !!