22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪತ್ನಿ-ಮಗಳ ಮೇಲೆ ಪತಿಯಿಂದ ಮಾರಾಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು: ಪೊಲೀಸರ ತನಿಖೆ

ಶಿಶಿಲ: ಇಲ್ಲಿಯ ಕೋಟೆ ಬಾಗಿಲು ನಿವಾಸಿ ಸುರೇಶ್ ಎಂಬವರು ಪತ್ನಿ, ಮಗಳಿಗೆ ಮಾರಣಾಂತಿಕ ಹಲ್ಲೆ ಮಾಡಿದ್ದು, ತೀವ್ರ ಗಾಯಗೊಂಡ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ ಘಟನೆ ಡಿ.18 ರಂದು ತಡರಾತ್ರಿ ಶಿಶಿಲ ಗ್ರಾಮದ ಕೋಟೆಬಾಗಿಲು ಎಂಬಲ್ಲಿ ನಡೆದಿದೆ.


ಕೋಟೆಬಾಗಿಲು ನಿವಾಸಿ ಸುರೇಶ್ ತನ್ನ ಪತ್ನಿಯ ಮುಖದ ಭಾಗಕ್ಕೆ ಕಚ್ಚಿ ಮಾಂಸ ಹೊರತೆಗೆದು ಕಣ್ಣಿಗೆ ಕೂಡ ಕೋಲಿನಿಂದ ಹೊಡೆದು ಎಡ ಭಾಗದ ಕಣ್ಣನ್ನು ಸಂಪೂರ್ಣ ಹಾನಿಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮಗಳಿಗೆ ತಲೆಯಭಾಗಕ್ಕೆ ಹೊಡೆದಿದ್ದು, ಪ್ರಾಣ ಭಯದಿಂದ ಇಬ್ಬರು ತಪ್ಪಿಸಿಕೊಂಡಿದ್ದು ಮಗಳು ನೆರೆಯ ಮನೆಗೆ ಬಂದು ವಿಷಯ ತಿಳಿಸಿದಾಗ ವಿಪತ್ತು ನಿರ್ವಹಣಾ ತಂಡ, ನೆರೆಹೊರೆಯವರು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು.

ಈ ಸಂದರ್ಭ ಪತಿ ಸುರೇಶ್‌ನ ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ ಪತ್ನಿ ಅಲ್ಲಿರಲಿಲ್ಲ. ಅವರಿಗಾಗಿ ರಾತ್ರಿ ಹುಡುಕಾಡಿದಾಗ ಅವರು ಎಲ್ಲಿಯೂ ಪತ್ತೆಯಾಗಲಿಲ್ಲ, ಮರುದಿನ ಬೆಳಿಗ್ಗೆ ಮತ್ತೆ ಹುಡುಕಾಡಿದಾಗ ಸ್ಥಳೀಯ ಮನೆಯವರ ಕೊಟ್ಟಿಗೆಯಲ್ಲಿ ಅವರು ತೀವ್ರ ಅಸ್ವಸ್ಥರಾಗಿ ಬಿದ್ದುಕೊಂಡಿರುವುದು ಕಂಡುಬಂದಿದ್ದು, ತಕ್ಷಣ ಸ್ಪಂದಿಸಿದ ಸ್ಥಳೀಯರು ಆಂಬ್ಯುಲೆನ್ಸ್ ಸಹಾಯದಿಂದ ಉಜಿರೆ ಖಾಸಗಿ ಆಸ್ಪತ್ರೆಗೆ ತಾಯಿ ಮತ್ತು ಮಗಳನ್ನು ದಾಖಲಿಸಿದ್ದಾರೆ.

ಧರ್ಮಸ್ಥಳ ಪೊಲೀಸರಿಗೆ ಈ ಪ್ರಕರಣದ ಕುರಿತು ಮಾಹಿತಿ ನೀಡಲಾಗಿದ್ದು, ಅವರು ಆಸ್ಪತ್ರೆಗೆ ತೆರಳಿ ಘಟನೆಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಶಿಶಿಲ ವಿಪತ್ತು ನಿರ್ವಹಣಾ ತಂಡದ ಗಿರಿಜಾ ಎಸ್. ಕೆದಿಲ್ಲಾಯ, ರಮೇಶ್ ಬೈರಕಟ್ಟ, ಗಾಯತ್ರಿ ಸೇವಾ ಪ್ರತಿನಿಧಿ, ರೂಪೇಶ್ ಬೈಪಾಡಿ, ರಾಧಕೃಷ್ಣ, ಕಿರಣ್, ವಿಮಲ, ಹಾಗೂ ಸ್ಥಳೀಯರು ಹುಡುಕಾಟಕ್ಕೆ ಹಾಗೂ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಸುರೇಶ್ ಪಾನಮತ್ತನಾಗಿ ಈ ರೀತಿ ವರ್ತಿಸಿದನೇ ಅಥವಾ ಬೇರೆ ಯಾವುದಾದರರೂ ಮಾದಕ ವಸ್ತು ಸೇವಿಸಿ ಈ ಕೃತ್ಯದಿಂದ ಎಸಗಿರಬಹುದೇ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಧರ್ಮಸ್ಥಳ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ದೊರೆರಾಜು

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಿಲ್ಲವ ಸಂಘಟನೆಗಳ ಆಗ್ರಹ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗದಿಂದ ಕೊಮೊಡೋ ವೀಲ್ ಚೈರ್ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸುಳ್ಳು ಸುದ್ದಿ ಪ್ರಸಾರ ಹಾಗೂ ಅವ್ಯಾಚ್ಯ ನಿಂದನೆ ದೂರು : ಸುವರ್ಣ ನ್ಯೂಸ್ ಆ್ಯಂಕರ್ ಹಾಗೂ ವರದಿಗಾರ, ಕ್ಯಾಮೆರಾಮ್ಯಾನ್ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!