ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya

ತಣ್ಣೀರುಪಂತ: ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನಿಯಮಿತ ಕಲ್ಲೇರಿ, ಇದರ ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ ಡಿ. 19 ರಂದು ತಣ್ಣೀರುಪಂತ ಸೇವಾ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಸಹಕಾರ ರತ್ನ ಬಾವಂತಬೆಟ್ಟು ನಿರಂಜನ್ ನೆರವೇರಿಸಿದರು.
ಅಧ್ಯಕ್ಷತೆಯನ್ನು ರೈತ ಉತ್ಪಾದಕರ ಕಂಪೆನಿ ನಿ. ಕಲ್ಲೇರಿ ನವಚೇತನಾ ತೋಟಗಾರಿಕೆಯ ಅಧ್ಯಕ್ಷ ಲಿಂಗಪ್ಪ ನಾಯ್ಕ ವಹಿಸಿದರು.

ಮುಖ್ಯ ಅತಿಥಿಗಳಾಗಿ ತಣ್ಣೀರುಪಂತ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಹೇಮಾವತಿ, ದ.ಕ. ಜಿಲ್ಲೆ ಮಂಗಳೂರಿನ ಜಂಟಿ ಕೃಷಿ ನಿರ್ದೇಶಕ ಎಚ್.ಕೆಂಪೇಗೌಡ, ಪುತ್ತೂರು ಉಪವಿಭಾಗದ ಉಪಕೃಷಿ ನಿರ್ದೇಶಕ ಶಿವಶಂಕರ್ ಎಚ್. ದಾನೆಗೂಂಡರ್, ಕೆ.ವಿ.ಕೆ. ಮಂಗಳೂರಿನ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ| ಟಿ.ಜೆ. ರಮೇಶ, ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕ ರಂಜಿತ್ ಕುಮಾರ್ ಟಿ.ಎಮ್., ಬೆಳ್ತಂಗಡಿ ಜಿಲ್ಲಾ ಪಂಚಾಯತ್ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಕೆ.ಎಸ್. ಚಂದ್ರಶೇಖರ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷ ಪುರಂದರ ಗೌಡ ಎನ್.ಕೆ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಶೆಟ್ಟಿ ಮತ್ತು ಆಡಳಿತ ಮಂಡಳಿ, ಸದಸ್ಯರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Leave a Comment

error: Content is protected !!