April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

ತಣ್ಣೀರುಪಂತ: ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನಿಯಮಿತ ಕಲ್ಲೇರಿ, ಇದರ ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ ಡಿ. 19 ರಂದು ತಣ್ಣೀರುಪಂತ ಸೇವಾ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಸಹಕಾರ ರತ್ನ ಬಾವಂತಬೆಟ್ಟು ನಿರಂಜನ್ ನೆರವೇರಿಸಿದರು.
ಅಧ್ಯಕ್ಷತೆಯನ್ನು ರೈತ ಉತ್ಪಾದಕರ ಕಂಪೆನಿ ನಿ. ಕಲ್ಲೇರಿ ನವಚೇತನಾ ತೋಟಗಾರಿಕೆಯ ಅಧ್ಯಕ್ಷ ಲಿಂಗಪ್ಪ ನಾಯ್ಕ ವಹಿಸಿದರು.

ಮುಖ್ಯ ಅತಿಥಿಗಳಾಗಿ ತಣ್ಣೀರುಪಂತ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಹೇಮಾವತಿ, ದ.ಕ. ಜಿಲ್ಲೆ ಮಂಗಳೂರಿನ ಜಂಟಿ ಕೃಷಿ ನಿರ್ದೇಶಕ ಎಚ್.ಕೆಂಪೇಗೌಡ, ಪುತ್ತೂರು ಉಪವಿಭಾಗದ ಉಪಕೃಷಿ ನಿರ್ದೇಶಕ ಶಿವಶಂಕರ್ ಎಚ್. ದಾನೆಗೂಂಡರ್, ಕೆ.ವಿ.ಕೆ. ಮಂಗಳೂರಿನ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ| ಟಿ.ಜೆ. ರಮೇಶ, ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕ ರಂಜಿತ್ ಕುಮಾರ್ ಟಿ.ಎಮ್., ಬೆಳ್ತಂಗಡಿ ಜಿಲ್ಲಾ ಪಂಚಾಯತ್ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಕೆ.ಎಸ್. ಚಂದ್ರಶೇಖರ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷ ಪುರಂದರ ಗೌಡ ಎನ್.ಕೆ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಶೆಟ್ಟಿ ಮತ್ತು ಆಡಳಿತ ಮಂಡಳಿ, ಸದಸ್ಯರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya

ಆರೋಗ್ಯ ರಕ್ಷಕರಿಗೆ ರಕ್ಷೆ ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾಬಂಧನ ಆಚರಿಸಿದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

Suddi Udaya

ರಾಜ್ಯಮಟ್ಟದ ಪುರುಷರ ಹ್ಯಾಂಡ್ ಬಾಲ್ ಚಾಂಪಿಯನ್ಶಿಪ್ – ಮಾದಪ್ಪ ಸ್ಮಾರಕ ಟ್ರೋಫಿ

Suddi Udaya

ಉಜಿರೆ: ವೈದ್ಯರ ದಿನಾಚರಣೆಯ ಅಂಗವಾಗಿ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈರವರಿಗೆ ಸನ್ಮಾನ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

Suddi Udaya
error: Content is protected !!