25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

ತಣ್ಣೀರುಪಂತ: ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನಿಯಮಿತ ಕಲ್ಲೇರಿ, ಇದರ ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ ಡಿ. 19 ರಂದು ತಣ್ಣೀರುಪಂತ ಸೇವಾ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಸಹಕಾರ ರತ್ನ ಬಾವಂತಬೆಟ್ಟು ನಿರಂಜನ್ ನೆರವೇರಿಸಿದರು.
ಅಧ್ಯಕ್ಷತೆಯನ್ನು ರೈತ ಉತ್ಪಾದಕರ ಕಂಪೆನಿ ನಿ. ಕಲ್ಲೇರಿ ನವಚೇತನಾ ತೋಟಗಾರಿಕೆಯ ಅಧ್ಯಕ್ಷ ಲಿಂಗಪ್ಪ ನಾಯ್ಕ ವಹಿಸಿದರು.

ಮುಖ್ಯ ಅತಿಥಿಗಳಾಗಿ ತಣ್ಣೀರುಪಂತ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಹೇಮಾವತಿ, ದ.ಕ. ಜಿಲ್ಲೆ ಮಂಗಳೂರಿನ ಜಂಟಿ ಕೃಷಿ ನಿರ್ದೇಶಕ ಎಚ್.ಕೆಂಪೇಗೌಡ, ಪುತ್ತೂರು ಉಪವಿಭಾಗದ ಉಪಕೃಷಿ ನಿರ್ದೇಶಕ ಶಿವಶಂಕರ್ ಎಚ್. ದಾನೆಗೂಂಡರ್, ಕೆ.ವಿ.ಕೆ. ಮಂಗಳೂರಿನ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ| ಟಿ.ಜೆ. ರಮೇಶ, ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕ ರಂಜಿತ್ ಕುಮಾರ್ ಟಿ.ಎಮ್., ಬೆಳ್ತಂಗಡಿ ಜಿಲ್ಲಾ ಪಂಚಾಯತ್ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಕೆ.ಎಸ್. ಚಂದ್ರಶೇಖರ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷ ಪುರಂದರ ಗೌಡ ಎನ್.ಕೆ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಶೆಟ್ಟಿ ಮತ್ತು ಆಡಳಿತ ಮಂಡಳಿ, ಸದಸ್ಯರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮೂಡುಕೋಡಿ: ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ವತಿಯಿಂದ ದೇಲoಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮೃತ್ಯುoಜಯ ಹೋಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya
error: Content is protected !!