ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಕಲ್ಮಂಜ: ಸರಕಾರಿ ಪ್ರೌಢಶಾಲೆ ಕಲ್ಮಂಜ ಇಲ್ಲಿಯ ಪ್ರತಿಭಾದಿನಾಚರಣೆ ಇತ್ತೀಚೆಗೆ ನಡೆಯಿತು.
ಹಿರಿಯ ವಿದ್ಯಾರ್ಥಿ ನವೀನ್ ಕುಮಾರ್ ಧ್ವಜಾರೋಹಣಗೈದು ಶುಭ ಹಾರೈಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶಾಲಾ ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷ ಮಂಜುನಾಥ ಶೆಟ್ಟಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಉಜಿರೆಯ ಶ್ರೀನಿಧಿ ಸ್ಟೋರ್ಸ್ ಮಾಲಕ ವಾಮನ ಬೆಂಡೆ ಭಾಗವಹಿಸಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ಸಂಸ್ಥೆಯ ಹಿರಿಯ ವಿದ್ಯಾರ್ಥಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಅಸಿಸ್ಟೆಂಟ್ ಮುಖ್ಯೋಪಾಧ್ಯಾಯರು ಅಶೋಕ್ ಕುಮಾರ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಯೋಗಾಸನದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಮೋಹಿತ್ ಮತ್ತು ವಿಭಾಗಮಟ್ಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಚಿತ್ರಕಲೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿ ಶ್ರವಣ್ ನನ್ನು ಸನ್ಮಾನಿಸಲಾಯಿತು. ಸಂಸ್ಥೆಯಲ್ಲಿ ಹಲವು ವರ್ಷಗಳ ಕಾಲ ಮುಖ್ಯ ಅಡುಗೆಯವರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಹೊಂದಿದ ಅನಿತಾರವರನ್ನು ಸನ್ಮಾನಿಸಲಾಯಿತು. ಅಪರಾಹ್ನ ವಿದ್ಯಾರ್ಥಿಗಳಿಂದ ನೃತ್ಯ ನಾಟಕ ಯೋಗಾಸನ ಇತ್ಯಾದಿ ಸಾಂಸ್ಕೃತಿಕ ಕಾರ್ಯಗಳನ್ನು ನಡೆಸಲಾಯಿತು.
ಮಂಜುನಾಥ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಸ್ವಾಗತಿಸಿ ಹೇಮಲತಾ ನಿರ್ವಹಿಸಿದರು. ಹಾಗೂ ಸವಿತಾ ಧನ್ಯವಾದತ್ತರು. ಶಿಕ್ಷಕಿಯರಾದ ಮಾಲಿನಿ ಹೆಗಡೆ ವರದಿ ವಾಚಿಸಿ ಪ್ರೇಮಲತಾ ಸನ್ಮಾನ ಕಾರ್ಯಕ್ರಮ ನಿರ್ವಹಿಸಿ ರಮ್ಯ ಹಾಗೂ ನೃತ್ಯಶ್ರಿ ಸಹಕರಿಸಿದರು.

ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ತಾಯಂದಿರ ಸಮಿತಿ ಸದಸ್ಯರು ಹಾಜರಿದ್ದು ಸಹಕರಿಸಿದರು.

Leave a Comment

error: Content is protected !!