25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

ಕಲ್ಮಂಜ: ಸರಕಾರಿ ಪ್ರೌಢಶಾಲೆ ಕಲ್ಮಂಜ ಇಲ್ಲಿಯ ಪ್ರತಿಭಾದಿನಾಚರಣೆ ಇತ್ತೀಚೆಗೆ ನಡೆಯಿತು.
ಹಿರಿಯ ವಿದ್ಯಾರ್ಥಿ ನವೀನ್ ಕುಮಾರ್ ಧ್ವಜಾರೋಹಣಗೈದು ಶುಭ ಹಾರೈಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶಾಲಾ ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷ ಮಂಜುನಾಥ ಶೆಟ್ಟಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಉಜಿರೆಯ ಶ್ರೀನಿಧಿ ಸ್ಟೋರ್ಸ್ ಮಾಲಕ ವಾಮನ ಬೆಂಡೆ ಭಾಗವಹಿಸಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ಸಂಸ್ಥೆಯ ಹಿರಿಯ ವಿದ್ಯಾರ್ಥಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಅಸಿಸ್ಟೆಂಟ್ ಮುಖ್ಯೋಪಾಧ್ಯಾಯರು ಅಶೋಕ್ ಕುಮಾರ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಯೋಗಾಸನದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಮೋಹಿತ್ ಮತ್ತು ವಿಭಾಗಮಟ್ಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಚಿತ್ರಕಲೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿ ಶ್ರವಣ್ ನನ್ನು ಸನ್ಮಾನಿಸಲಾಯಿತು. ಸಂಸ್ಥೆಯಲ್ಲಿ ಹಲವು ವರ್ಷಗಳ ಕಾಲ ಮುಖ್ಯ ಅಡುಗೆಯವರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಹೊಂದಿದ ಅನಿತಾರವರನ್ನು ಸನ್ಮಾನಿಸಲಾಯಿತು. ಅಪರಾಹ್ನ ವಿದ್ಯಾರ್ಥಿಗಳಿಂದ ನೃತ್ಯ ನಾಟಕ ಯೋಗಾಸನ ಇತ್ಯಾದಿ ಸಾಂಸ್ಕೃತಿಕ ಕಾರ್ಯಗಳನ್ನು ನಡೆಸಲಾಯಿತು.
ಮಂಜುನಾಥ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಸ್ವಾಗತಿಸಿ ಹೇಮಲತಾ ನಿರ್ವಹಿಸಿದರು. ಹಾಗೂ ಸವಿತಾ ಧನ್ಯವಾದತ್ತರು. ಶಿಕ್ಷಕಿಯರಾದ ಮಾಲಿನಿ ಹೆಗಡೆ ವರದಿ ವಾಚಿಸಿ ಪ್ರೇಮಲತಾ ಸನ್ಮಾನ ಕಾರ್ಯಕ್ರಮ ನಿರ್ವಹಿಸಿ ರಮ್ಯ ಹಾಗೂ ನೃತ್ಯಶ್ರಿ ಸಹಕರಿಸಿದರು.

ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ತಾಯಂದಿರ ಸಮಿತಿ ಸದಸ್ಯರು ಹಾಜರಿದ್ದು ಸಹಕರಿಸಿದರು.

Related posts

ಅರಸಿನಮಕ್ಕಿ: ಕೋಡಿಯಡ್ಕ ನಿವಾಸಿ ಲಕ್ಷ್ಮಿ ಅಮ್ಮ ನಿಧನ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ

Suddi Udaya

ಗ್ರಾ.ಪಂ. ನೌಕರರ ಜಿಲ್ಲಾ ಮಟ್ಟದ ಕುಂದು ಕೊರತೆ ಅದಾಲತ್ ಸಭೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಜು. 24 ರಿಂದ ಮುಳಿಯ ಮಾನ್ಸೂನ್ ಧಮಾಕ: ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಆಕರ್ಷಕ ರಿಯಾಯಿತಿ: ಆ. 5 ಮುಳಿಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ,ಗ್ರಾಹಕರ ಸಮಾಗಮ,

Suddi Udaya

ಲಿಯೋ ಕ್ಲಬ್ ಬೆಳ್ತಂಗಡಿ “ಧ್ವನಿ” ವಾಯ್ಸ್ ಆಫ್ ಸರ್ವಿಸ್ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

Suddi Udaya
error: Content is protected !!