March 7, 2026
ಅಪರಾಧ ಸುದ್ದಿ

ಅಕ್ರಮವಾಗಿ ಪ್ರವೇಶಿಸಿ ಕಟ್ಟಡ ಕೆಡವಿದ ಪ್ರಕರಣ: ಶಿಬಾಜೆಯ ಮಹಿಳೆಯಿಂದ ಪೊಲೀಸರಿಗೆ ದೂರು

ಶಿಬಾಜೆ: ನಮ್ಮ ಪಟ್ಟಾ ಜಮೀನಿಗೆ ಸೇರಿದ ಜಾಗದಲ್ಲಿದ್ದ ನಮ್ಮ ಅಂಗಡಿ ಕಟ್ಟಡವನ್ನು ರಾತ್ರಿ ಸಮಯ ಕೆಡವಿ ಹಾಕಿರುವುದಾಗಿ ಶಿಬಾಜೆ ಗ್ರಾಮದ ಅರಂಪಾದೆ ಶ್ರೀಮತಿ ಲತಾ ಪಿ.ಎಸ್ ಅವರು ಟಿ.ಕೆ ಮ್ಯಾಥ್ಯು ಮತ್ತಿತರರ ಮೇಲೆ ಆರೋಪ ಹೊರಿಸಿ ಡಿ.20ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ.

ನಮ್ಮ ವಶದಲ್ಲಿದ್ದ ಪಟ್ಟಾ ಜಮೀನಿನ ಲಗ್ತಿ ಜಾಗದಲ್ಲಿ ಸುಮಾರು 25 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಕಟ್ಟಡದ ಸುತ್ತ ಅವರು ಡಿ.14ರಂದು ಬೇಲಿ ನಿರ್ಮಾಣ ಮಾಡಿದ್ದರು. ಸದ್ರಿ ಬೇಲಿಯನ್ನು ನಾನು ಮತ್ತು ನನ್ನ ಗಂಡ ತೆರವುಗೊಳಿಸಿದ್ದೆವು. ಇದನ್ನು ತಿಳಿದ ಅವರು ಡಿ.19ರಂದು ಬೆಳಗ್ಗೆ ಅನಾವಶ್ಯಕವಾಗಿ ತಗಾದೆ ತೆಗೆದು ನಮಗೆ ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಠಾಣೆಗೆ ದೂರು ನೀಡಿದ್ದೇವೆ. ಇದನ್ನು ತಿಳಿದ ಅವರು ಡಿ.19ರಂದು ತಡರಾತ್ರಿ ಅಂಗಡಿ ಕಟ್ಟಡ ಇರುವ ಜಾಗಕ್ಕೆ ಅಕ್ರಮವಾಗಿ ಪ್ರವೇಶಿಸಿ ಕಟ್ಟಡ ಕಡವುತ್ತಿದ್ದ ಸಂದರ್ಭ ಆಕ್ಷೇಪಿಸಿದ ನಮಗೆ ಜೀವಬೆದರಿಕೆ ಹಾಕಿರುವುದಾಗಿ ಲತಾ ಪಿ.ಎಸ್ ಡಿ.2೦ರಂದು ಧರ್ಮಸ್ಥಳ ಠಾಣೆಗೆ ಮತ್ತೊಂದು ದೂರು ನೀಡಿದ್ದಾರೆ.

Related posts

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

Suddi Udaya

ಮೇಲಂತಬೆಟ್ಟು: ಅಕ್ರಮ ಕೋಳಿ ಅಂಕದ ಅಡ್ಡಕ್ಕೆ ಪೊಲೀಸರ ದಾಳಿ

Suddi Udaya

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

Suddi Udaya

ಬೆಳಾಲು: ಸೊಸೈಟಿ ವಂಚನೆ ಪ್ರಕರಣ ಆರೋಪಿ ಸದಾಶಿವ ಬಂಧನ- ಕೋರ್ಟ್ ಗೆ ಹಾಜರು ಪಡಿಸಿದ ಪೊಲೀಸರು

Suddi Udaya

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya
error: Content is protected !!