23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಅಕ್ರಮವಾಗಿ ಪ್ರವೇಶಿಸಿ ಕಟ್ಟಡ ಕೆಡವಿದ ಪ್ರಕರಣ: ಶಿಬಾಜೆಯ ಮಹಿಳೆಯಿಂದ ಪೊಲೀಸರಿಗೆ ದೂರು

ಶಿಬಾಜೆ: ನಮ್ಮ ಪಟ್ಟಾ ಜಮೀನಿಗೆ ಸೇರಿದ ಜಾಗದಲ್ಲಿದ್ದ ನಮ್ಮ ಅಂಗಡಿ ಕಟ್ಟಡವನ್ನು ರಾತ್ರಿ ಸಮಯ ಕೆಡವಿ ಹಾಕಿರುವುದಾಗಿ ಶಿಬಾಜೆ ಗ್ರಾಮದ ಅರಂಪಾದೆ ಶ್ರೀಮತಿ ಲತಾ ಪಿ.ಎಸ್ ಅವರು ಟಿ.ಕೆ ಮ್ಯಾಥ್ಯು ಮತ್ತಿತರರ ಮೇಲೆ ಆರೋಪ ಹೊರಿಸಿ ಡಿ.20ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ.

ನಮ್ಮ ವಶದಲ್ಲಿದ್ದ ಪಟ್ಟಾ ಜಮೀನಿನ ಲಗ್ತಿ ಜಾಗದಲ್ಲಿ ಸುಮಾರು 25 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಕಟ್ಟಡದ ಸುತ್ತ ಅವರು ಡಿ.14ರಂದು ಬೇಲಿ ನಿರ್ಮಾಣ ಮಾಡಿದ್ದರು. ಸದ್ರಿ ಬೇಲಿಯನ್ನು ನಾನು ಮತ್ತು ನನ್ನ ಗಂಡ ತೆರವುಗೊಳಿಸಿದ್ದೆವು. ಇದನ್ನು ತಿಳಿದ ಅವರು ಡಿ.19ರಂದು ಬೆಳಗ್ಗೆ ಅನಾವಶ್ಯಕವಾಗಿ ತಗಾದೆ ತೆಗೆದು ನಮಗೆ ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಠಾಣೆಗೆ ದೂರು ನೀಡಿದ್ದೇವೆ. ಇದನ್ನು ತಿಳಿದ ಅವರು ಡಿ.19ರಂದು ತಡರಾತ್ರಿ ಅಂಗಡಿ ಕಟ್ಟಡ ಇರುವ ಜಾಗಕ್ಕೆ ಅಕ್ರಮವಾಗಿ ಪ್ರವೇಶಿಸಿ ಕಟ್ಟಡ ಕಡವುತ್ತಿದ್ದ ಸಂದರ್ಭ ಆಕ್ಷೇಪಿಸಿದ ನಮಗೆ ಜೀವಬೆದರಿಕೆ ಹಾಕಿರುವುದಾಗಿ ಲತಾ ಪಿ.ಎಸ್ ಡಿ.2೦ರಂದು ಧರ್ಮಸ್ಥಳ ಠಾಣೆಗೆ ಮತ್ತೊಂದು ದೂರು ನೀಡಿದ್ದಾರೆ.

Related posts

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ ಪತ್ರಿಕಾ ಹೇಳಿಕೆ

Suddi Udaya

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿಂದೂ ಸಂಘಟನೆಗಳಿಂದ ಇಂದು(ಮೇ 2) ದ.ಕ ಜಿಲ್ಲೆ ಬಂದ್ ಗೆ ಕರೆ

Suddi Udaya
error: Content is protected !!