25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಅಕ್ರಮವಾಗಿ ಪ್ರವೇಶಿಸಿ ಕಟ್ಟಡ ಕೆಡವಿದ ಪ್ರಕರಣ: ಶಿಬಾಜೆಯ ಮಹಿಳೆಯಿಂದ ಪೊಲೀಸರಿಗೆ ದೂರು

ಶಿಬಾಜೆ: ನಮ್ಮ ಪಟ್ಟಾ ಜಮೀನಿಗೆ ಸೇರಿದ ಜಾಗದಲ್ಲಿದ್ದ ನಮ್ಮ ಅಂಗಡಿ ಕಟ್ಟಡವನ್ನು ರಾತ್ರಿ ಸಮಯ ಕೆಡವಿ ಹಾಕಿರುವುದಾಗಿ ಶಿಬಾಜೆ ಗ್ರಾಮದ ಅರಂಪಾದೆ ಶ್ರೀಮತಿ ಲತಾ ಪಿ.ಎಸ್ ಅವರು ಟಿ.ಕೆ ಮ್ಯಾಥ್ಯು ಮತ್ತಿತರರ ಮೇಲೆ ಆರೋಪ ಹೊರಿಸಿ ಡಿ.20ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದಾರೆ.

ನಮ್ಮ ವಶದಲ್ಲಿದ್ದ ಪಟ್ಟಾ ಜಮೀನಿನ ಲಗ್ತಿ ಜಾಗದಲ್ಲಿ ಸುಮಾರು 25 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಕಟ್ಟಡದ ಸುತ್ತ ಅವರು ಡಿ.14ರಂದು ಬೇಲಿ ನಿರ್ಮಾಣ ಮಾಡಿದ್ದರು. ಸದ್ರಿ ಬೇಲಿಯನ್ನು ನಾನು ಮತ್ತು ನನ್ನ ಗಂಡ ತೆರವುಗೊಳಿಸಿದ್ದೆವು. ಇದನ್ನು ತಿಳಿದ ಅವರು ಡಿ.19ರಂದು ಬೆಳಗ್ಗೆ ಅನಾವಶ್ಯಕವಾಗಿ ತಗಾದೆ ತೆಗೆದು ನಮಗೆ ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಠಾಣೆಗೆ ದೂರು ನೀಡಿದ್ದೇವೆ. ಇದನ್ನು ತಿಳಿದ ಅವರು ಡಿ.19ರಂದು ತಡರಾತ್ರಿ ಅಂಗಡಿ ಕಟ್ಟಡ ಇರುವ ಜಾಗಕ್ಕೆ ಅಕ್ರಮವಾಗಿ ಪ್ರವೇಶಿಸಿ ಕಟ್ಟಡ ಕಡವುತ್ತಿದ್ದ ಸಂದರ್ಭ ಆಕ್ಷೇಪಿಸಿದ ನಮಗೆ ಜೀವಬೆದರಿಕೆ ಹಾಕಿರುವುದಾಗಿ ಲತಾ ಪಿ.ಎಸ್ ಡಿ.2೦ರಂದು ಧರ್ಮಸ್ಥಳ ಠಾಣೆಗೆ ಮತ್ತೊಂದು ದೂರು ನೀಡಿದ್ದಾರೆ.

Related posts

ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ಅಕ್ರಮವಾಗಿ ದಾಸ್ತಾನು ಮಾಡಿದ್ದ ಡಿಸೇಲ್ ಪತ್ತೆ: ಬೆಳ್ತಂಗಡಿ ಡಿವೈಎಸ್ಪಿ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಬೆಳಾಲು: ಸೊಸೈಟಿ ವಂಚನೆ ಪ್ರಕರಣ ಆರೋಪಿ ಸದಾಶಿವ ಬಂಧನ- ಕೋರ್ಟ್ ಗೆ ಹಾಜರು ಪಡಿಸಿದ ಪೊಲೀಸರು

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರ ಮೇಲೆ ಹಲ್ಲೆ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ಹಲವು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!