ಕಳೆಂಜ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಶವ ಮೇಲೆತ್ತಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಕಳೆಂಜ: ಇಲ್ಲಿಯ ಕಲ್ಲಗುಡ್ಡೆ ನಿವಾಸಿ ರಾಮು (35ವ)ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.19 ರಂದು ತಡರಾತ್ರಿ ನಡೆದಿದೆ.

ತಕ್ಷಣ ಮಾಹಿತಿ ತಿಳಿದ ಸ್ಥಳೀಯರು ಬಾವಿಗೆ ಇಳಿಯುವ ನಿಪುಣರು ಇಲ್ಲದ ಕಾರಣ ಶೌರ್ಯ ವಿಪತ್ತು ತಂಡವನ್ನು ಸಂಪರ್ಕಿಸಿದ್ದಾರೆ.

ಅರಸಿನಮಕ್ಕಿ-ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಅವಿನಾಶ್ ಭಿಡೆ ಮತ್ತು ರಮೇಶ್ ರವರು ಸ್ಥಳೀಯರ ಸಹಾಯದಿಂದ ಮೃತ ದೇಹವನ್ನು ಮೇಲೆತ್ತಿದ್ದಾರೆ.
ಈ ಬಗ್ಗೆ ಧರ್ಮಸ್ಥಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Comment

error: Content is protected !!