ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ: ಧರ್ಮಸ್ಥಳಕ್ಕೆ ತನ್ನ ಸ್ನೇಹಿತೆಯರ ಜೊತೆ ಯಾತ್ರಾರ್ಥಿಗಳಾಗಿ ಬಂದವರು, ಸುಬ್ರಮಣ್ಯಕ್ಕೆ ಹೋಗಲು ಧರ್ಮಸ್ಥಳ ಕೆಎಸ್‌ ಆರ್‌ ಟಿ ಸಿ ಬಸ್ ನಿಲ್ದಾಣದ ಬಳಿ ಸಂಜೆ ನಿಂತುಕೊಂಡಿದ್ದಾಗ, ಜನಸಂದಣಿಯಲ್ಲಿ ಯಾತ್ರಾರ್ಥಿಯ ಕೈಯಲ್ಲಿದ್ದ ಮಾಂಗಲ್ಯ ಸರವನ್ನು ಇರಿಸಿದ ಪರ್ಸ್ ಅನ್ನು ಯಾರೋ ಕಳ್ಳರು ಕಳವು ಮಾಡಿಕೊಂಡ ಘಟನೆ ಡಿ.18 ರಂದು ನಡೆದಿದೆ.

ಉತ್ತರ ಬೆಂಗಳೂರು ಪಲನಿ ಮುದಲಿಯಾರ್‌ ಸ್ಟ್ರೀಟ್‌, ಹಲಸೂರು ನಿವಾಸಿ ಶ್ರೀದೇವಿ (39ವ) ಎಂಬವರ ದೂರಿನಂತೆ, ಡಿ.18 ರಂದು ಬೆಳಿಗ್ಗೆ ಧರ್ಮಸ್ಥಳಕ್ಕೆ ತನ್ನ ಸ್ನೇಹಿತೆಯರ ಜೊತೆ ಯಾತ್ರಾರ್ಥಿಗಳಾಗಿ ಬಂದವರು, ಬಳಿಕ ಸುಬ್ರಮಣ್ಯಕ್ಕೆ ಹೋಗಲು ಧರ್ಮಸ್ಥಳ ಕೆಎಸ್‌ ಆರ್‌ ಟಿ ಸಿ ಬಸ್ ನಿಲ್ದಾಣದ ಬಳಿ ಸಂಜೆ ನಿಂತುಕೊಂಡಿದ್ದಾಗ, ಜನಸಂದಣಿಯಲ್ಲಿ ಮಹಿಳೆಯ ಕೈಯಲ್ಲಿದ್ದ ಮಾಂಗಲ್ಯ ಸರವನ್ನು ಇರಿಸಿದ ಪರ್ಸ್ ಅನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಕಳವಾದ ಮಾಂಗಲ್ಯ ಸರದ ಅಂದಾಜು ಮೌಲ್ಯ ರೂ. 2,00,000/ ಆಗಬಹುದು ಎಂಬುದಾಗಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 109/2023 ಕಲಂ:379 ಐ ಪಿ ಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Comment

error: Content is protected !!