July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಧರ್ಮಸ್ಥಳಕ್ಕೆ ತನ್ನ ಸ್ನೇಹಿತೆಯರ ಜೊತೆ ಯಾತ್ರಾರ್ಥಿಗಳಾಗಿ ಬಂದವರು, ಸುಬ್ರಮಣ್ಯಕ್ಕೆ ಹೋಗಲು ಧರ್ಮಸ್ಥಳ ಕೆಎಸ್‌ ಆರ್‌ ಟಿ ಸಿ ಬಸ್ ನಿಲ್ದಾಣದ ಬಳಿ ಸಂಜೆ ನಿಂತುಕೊಂಡಿದ್ದಾಗ, ಜನಸಂದಣಿಯಲ್ಲಿ ಯಾತ್ರಾರ್ಥಿಯ ಕೈಯಲ್ಲಿದ್ದ ಮಾಂಗಲ್ಯ ಸರವನ್ನು ಇರಿಸಿದ ಪರ್ಸ್ ಅನ್ನು ಯಾರೋ ಕಳ್ಳರು ಕಳವು ಮಾಡಿಕೊಂಡ ಘಟನೆ ಡಿ.18 ರಂದು ನಡೆದಿದೆ.

ಉತ್ತರ ಬೆಂಗಳೂರು ಪಲನಿ ಮುದಲಿಯಾರ್‌ ಸ್ಟ್ರೀಟ್‌, ಹಲಸೂರು ನಿವಾಸಿ ಶ್ರೀದೇವಿ (39ವ) ಎಂಬವರ ದೂರಿನಂತೆ, ಡಿ.18 ರಂದು ಬೆಳಿಗ್ಗೆ ಧರ್ಮಸ್ಥಳಕ್ಕೆ ತನ್ನ ಸ್ನೇಹಿತೆಯರ ಜೊತೆ ಯಾತ್ರಾರ್ಥಿಗಳಾಗಿ ಬಂದವರು, ಬಳಿಕ ಸುಬ್ರಮಣ್ಯಕ್ಕೆ ಹೋಗಲು ಧರ್ಮಸ್ಥಳ ಕೆಎಸ್‌ ಆರ್‌ ಟಿ ಸಿ ಬಸ್ ನಿಲ್ದಾಣದ ಬಳಿ ಸಂಜೆ ನಿಂತುಕೊಂಡಿದ್ದಾಗ, ಜನಸಂದಣಿಯಲ್ಲಿ ಮಹಿಳೆಯ ಕೈಯಲ್ಲಿದ್ದ ಮಾಂಗಲ್ಯ ಸರವನ್ನು ಇರಿಸಿದ ಪರ್ಸ್ ಅನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಕಳವಾದ ಮಾಂಗಲ್ಯ ಸರದ ಅಂದಾಜು ಮೌಲ್ಯ ರೂ. 2,00,000/ ಆಗಬಹುದು ಎಂಬುದಾಗಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 109/2023 ಕಲಂ:379 ಐ ಪಿ ಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ಜನಜಾಗೃತಿ ವೇದಿಕೆ ಆರ್ಥಿಕ ವರ್ಷದ ಪ್ರಥಮ ಸಭೆ: ನೂತನ ವರ್ಷದ ಕ್ರಿಯಾಯೋಜನೆಗೆ ಮಂಜೂರಾತಿ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya

CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್‌ನ ವಿದ್ಯಾರ್ಥಿಗಳು

Suddi Udaya

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!