25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಧರ್ಮಸ್ಥಳಕ್ಕೆ ತನ್ನ ಸ್ನೇಹಿತೆಯರ ಜೊತೆ ಯಾತ್ರಾರ್ಥಿಗಳಾಗಿ ಬಂದವರು, ಸುಬ್ರಮಣ್ಯಕ್ಕೆ ಹೋಗಲು ಧರ್ಮಸ್ಥಳ ಕೆಎಸ್‌ ಆರ್‌ ಟಿ ಸಿ ಬಸ್ ನಿಲ್ದಾಣದ ಬಳಿ ಸಂಜೆ ನಿಂತುಕೊಂಡಿದ್ದಾಗ, ಜನಸಂದಣಿಯಲ್ಲಿ ಯಾತ್ರಾರ್ಥಿಯ ಕೈಯಲ್ಲಿದ್ದ ಮಾಂಗಲ್ಯ ಸರವನ್ನು ಇರಿಸಿದ ಪರ್ಸ್ ಅನ್ನು ಯಾರೋ ಕಳ್ಳರು ಕಳವು ಮಾಡಿಕೊಂಡ ಘಟನೆ ಡಿ.18 ರಂದು ನಡೆದಿದೆ.

ಉತ್ತರ ಬೆಂಗಳೂರು ಪಲನಿ ಮುದಲಿಯಾರ್‌ ಸ್ಟ್ರೀಟ್‌, ಹಲಸೂರು ನಿವಾಸಿ ಶ್ರೀದೇವಿ (39ವ) ಎಂಬವರ ದೂರಿನಂತೆ, ಡಿ.18 ರಂದು ಬೆಳಿಗ್ಗೆ ಧರ್ಮಸ್ಥಳಕ್ಕೆ ತನ್ನ ಸ್ನೇಹಿತೆಯರ ಜೊತೆ ಯಾತ್ರಾರ್ಥಿಗಳಾಗಿ ಬಂದವರು, ಬಳಿಕ ಸುಬ್ರಮಣ್ಯಕ್ಕೆ ಹೋಗಲು ಧರ್ಮಸ್ಥಳ ಕೆಎಸ್‌ ಆರ್‌ ಟಿ ಸಿ ಬಸ್ ನಿಲ್ದಾಣದ ಬಳಿ ಸಂಜೆ ನಿಂತುಕೊಂಡಿದ್ದಾಗ, ಜನಸಂದಣಿಯಲ್ಲಿ ಮಹಿಳೆಯ ಕೈಯಲ್ಲಿದ್ದ ಮಾಂಗಲ್ಯ ಸರವನ್ನು ಇರಿಸಿದ ಪರ್ಸ್ ಅನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಕಳವಾದ ಮಾಂಗಲ್ಯ ಸರದ ಅಂದಾಜು ಮೌಲ್ಯ ರೂ. 2,00,000/ ಆಗಬಹುದು ಎಂಬುದಾಗಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 109/2023 ಕಲಂ:379 ಐ ಪಿ ಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya

ಧರ್ಮಸ್ಥಳ ಕಾಡಾನೆ ದಾಳಿ ಪ್ರದೇಶಕ್ಕೆ ಕೆ.ಎಸ್.ಎಂ.ಸಿ.ಎ ಅಧ್ಯಕ್ಷರ ತಂಡ ಭೇಟಿ

Suddi Udaya

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

Suddi Udaya

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya
error: Content is protected !!