23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಧರ್ಮಸ್ಥಳಕ್ಕೆ ತನ್ನ ಸ್ನೇಹಿತೆಯರ ಜೊತೆ ಯಾತ್ರಾರ್ಥಿಗಳಾಗಿ ಬಂದವರು, ಸುಬ್ರಮಣ್ಯಕ್ಕೆ ಹೋಗಲು ಧರ್ಮಸ್ಥಳ ಕೆಎಸ್‌ ಆರ್‌ ಟಿ ಸಿ ಬಸ್ ನಿಲ್ದಾಣದ ಬಳಿ ಸಂಜೆ ನಿಂತುಕೊಂಡಿದ್ದಾಗ, ಜನಸಂದಣಿಯಲ್ಲಿ ಯಾತ್ರಾರ್ಥಿಯ ಕೈಯಲ್ಲಿದ್ದ ಮಾಂಗಲ್ಯ ಸರವನ್ನು ಇರಿಸಿದ ಪರ್ಸ್ ಅನ್ನು ಯಾರೋ ಕಳ್ಳರು ಕಳವು ಮಾಡಿಕೊಂಡ ಘಟನೆ ಡಿ.18 ರಂದು ನಡೆದಿದೆ.

ಉತ್ತರ ಬೆಂಗಳೂರು ಪಲನಿ ಮುದಲಿಯಾರ್‌ ಸ್ಟ್ರೀಟ್‌, ಹಲಸೂರು ನಿವಾಸಿ ಶ್ರೀದೇವಿ (39ವ) ಎಂಬವರ ದೂರಿನಂತೆ, ಡಿ.18 ರಂದು ಬೆಳಿಗ್ಗೆ ಧರ್ಮಸ್ಥಳಕ್ಕೆ ತನ್ನ ಸ್ನೇಹಿತೆಯರ ಜೊತೆ ಯಾತ್ರಾರ್ಥಿಗಳಾಗಿ ಬಂದವರು, ಬಳಿಕ ಸುಬ್ರಮಣ್ಯಕ್ಕೆ ಹೋಗಲು ಧರ್ಮಸ್ಥಳ ಕೆಎಸ್‌ ಆರ್‌ ಟಿ ಸಿ ಬಸ್ ನಿಲ್ದಾಣದ ಬಳಿ ಸಂಜೆ ನಿಂತುಕೊಂಡಿದ್ದಾಗ, ಜನಸಂದಣಿಯಲ್ಲಿ ಮಹಿಳೆಯ ಕೈಯಲ್ಲಿದ್ದ ಮಾಂಗಲ್ಯ ಸರವನ್ನು ಇರಿಸಿದ ಪರ್ಸ್ ಅನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಕಳವಾದ ಮಾಂಗಲ್ಯ ಸರದ ಅಂದಾಜು ಮೌಲ್ಯ ರೂ. 2,00,000/ ಆಗಬಹುದು ಎಂಬುದಾಗಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 109/2023 ಕಲಂ:379 ಐ ಪಿ ಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya

ಶಾಸಕ ಹರೀಶ್ ಪೂಂಜರವರ ಜನ್ಮದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಸಹಸoಚಾಲಕ ಸಂದೀಪ್ ರೈ ಧರ್ಮಸ್ಥಳ ರವರಿಂದ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ವಿಶೇಷ ಭೋಜನ

Suddi Udaya

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Suddi Udaya

ಗುರುವಾಯನಕೆರೆ: ಎಕ್ಸೆಲ್‌ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಶ್ರೀ ಧ.ಮಂ. ಐಟಿಐ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ಸಾರ್ಟಿಸಿ ಬಸ್ ಮಂಜೂರು – ಶಾಸಕರ ಶಿಫಾರಸ್ಸಿನಂತೆ ಬಸ್ಸು ಮಂಜೂರಾಗಿದ್ದರೆ, ಅವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ- ಬಸ್ಸು ಮಂಜೂರು ಮಾಡಿಸಿದ್ದು, ನಾನೇ ಎಂದು ನಾನು ಪ್ರಮಾಣ ಮಾಡುತ್ತೇನೆ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ ಸವಾಲು

Suddi Udaya
error: Content is protected !!