September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ: ಧರ್ಮಸ್ಥಳಕ್ಕೆ ತನ್ನ ಸ್ನೇಹಿತೆಯರ ಜೊತೆ ಯಾತ್ರಾರ್ಥಿಗಳಾಗಿ ಬಂದವರು, ಸುಬ್ರಮಣ್ಯಕ್ಕೆ ಹೋಗಲು ಧರ್ಮಸ್ಥಳ ಕೆಎಸ್‌ ಆರ್‌ ಟಿ ಸಿ ಬಸ್ ನಿಲ್ದಾಣದ ಬಳಿ ಸಂಜೆ ನಿಂತುಕೊಂಡಿದ್ದಾಗ, ಜನಸಂದಣಿಯಲ್ಲಿ ಯಾತ್ರಾರ್ಥಿಯ ಕೈಯಲ್ಲಿದ್ದ ಮಾಂಗಲ್ಯ ಸರವನ್ನು ಇರಿಸಿದ ಪರ್ಸ್ ಅನ್ನು ಯಾರೋ ಕಳ್ಳರು ಕಳವು ಮಾಡಿಕೊಂಡ ಘಟನೆ ಡಿ.18 ರಂದು ನಡೆದಿದೆ.

ಉತ್ತರ ಬೆಂಗಳೂರು ಪಲನಿ ಮುದಲಿಯಾರ್‌ ಸ್ಟ್ರೀಟ್‌, ಹಲಸೂರು ನಿವಾಸಿ ಶ್ರೀದೇವಿ (39ವ) ಎಂಬವರ ದೂರಿನಂತೆ, ಡಿ.18 ರಂದು ಬೆಳಿಗ್ಗೆ ಧರ್ಮಸ್ಥಳಕ್ಕೆ ತನ್ನ ಸ್ನೇಹಿತೆಯರ ಜೊತೆ ಯಾತ್ರಾರ್ಥಿಗಳಾಗಿ ಬಂದವರು, ಬಳಿಕ ಸುಬ್ರಮಣ್ಯಕ್ಕೆ ಹೋಗಲು ಧರ್ಮಸ್ಥಳ ಕೆಎಸ್‌ ಆರ್‌ ಟಿ ಸಿ ಬಸ್ ನಿಲ್ದಾಣದ ಬಳಿ ಸಂಜೆ ನಿಂತುಕೊಂಡಿದ್ದಾಗ, ಜನಸಂದಣಿಯಲ್ಲಿ ಮಹಿಳೆಯ ಕೈಯಲ್ಲಿದ್ದ ಮಾಂಗಲ್ಯ ಸರವನ್ನು ಇರಿಸಿದ ಪರ್ಸ್ ಅನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುತ್ತಾರೆ.

ಕಳವಾದ ಮಾಂಗಲ್ಯ ಸರದ ಅಂದಾಜು ಮೌಲ್ಯ ರೂ. 2,00,000/ ಆಗಬಹುದು ಎಂಬುದಾಗಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 109/2023 ಕಲಂ:379 ಐ ಪಿ ಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ :ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನಿಂದ ಕಾರ್ಯಕ್ಷೇತ್ರ ವೀಕ್ಷಣಾ ಚಟುವಟಿಕೆ

Suddi Udaya

ಮದ್ದಡ್ಕ  : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ: ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್

Suddi Udaya

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಮಾಹಿತಿ ಕಾರ್ಯಾಗಾರ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!