32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

ಲಾಯಿಲ ಗ್ರಾಮ ಪಂಚಾಯತ್ ನ ಭಾರತ್ ಮಾತಾ ಸಭಾಭವದಲ್ಲಿ 2023-24 ನೇ ಸಾಲಿನ ಮಕ್ಕಳ ಗ್ರಾಮ ಸಭೆಯನ್ನು ಡಿ.19 ರಂದು ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ಎಂ.ಕೆ ವಹಿಸಿಕೊಂಡರು ಹಾಗೂ NRLM ನ ತಾಲೂಕು ಸಂಯೋಜಕರಾದ ವಿನೋದ್ ಪ್ರಸಾದ್ ರವರು ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಸಭೆಯಲ್ಲಿ ಉಪಾಧ್ಯಕ್ಷರಾದ ಸುಗಂಧಿ ಜಗನ್ನಾಥ ಕರ್ನೊಡಿ, ಶಾಲಾ ಮುಖ್ಯೋಪಾಧ್ಯಾಯರಾದ ಜಗನ್ನಾಥ ಹಾಗೂ ಪಡ್ಲಾಡಿ ಮುಖ್ಯೋಪಾಧ್ಯಾಯರಾದ ರಾಜೇಶ್ವರಿ, ಪಂಚಾಯತ್ ಸದಸ್ಯರಾದ ಜಯಂತಿ ಮಹೇಶ್ ಕೆ., ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀನಿವಾಸ ಡಿ.ಪಿ ಹಾಗೂ ಮಾಜಿ ಅಧ್ಯಕ್ಷರಾದ ರುಕ್ಮಯ್ಯ ಕನ್ನಾಜೆ ಮತ್ತು ಕುಂಟಿನಿ ಶಾಲಾ ನಾಯಕಿ ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಸದಸ್ಯರಾದ ಮಹೇಶ್ ಕೆ. ಮಕ್ಕಳ ಹಕ್ಕು, ಕರ್ತವ್ಯಗಳು ಹಾಗೂ ಜವಾಬ್ದಾರಿಗಳ ಬಗ್ಗೆ ಸವಿರವಾಗಿ ಸಭೆಗೆ ಮಾಹಿತಿ ನೀಡಿದರು. ಮಕ್ಕಳಿಗೆ ಶಾಲೆಯಲ್ಲಿ ನಡೆಸಿದ ವಿವಿಧ ಸ್ಪರ್ಧೆಗಳಿಗೆ ಬಹುಮಾನ ವಿತರಿಸಲಾಯಿತು ಮತ್ತು ಶಾಲಾ ಮಕ್ಕಳ ಬೇಡಿಕೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯ ನಿರೂಪಣೆಯನ್ನು ಪಂಚಾಯತ್ ಲೆಕ್ಕಾ ಸಹಾಯಕರಾದ ಸುಪ್ರಿತಾ ಎಸ್ ಶೆಟ್ಟಿ ನಡೆಸಿಕೊಟ್ಟರು.

Related posts

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

Suddi Udaya

ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆಯಲ್ಲಿ ಎಸ್.ಡಿ.ಪಿ.ಐ ಆಗ್ರಹ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya

ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya
error: Content is protected !!