ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

ಲಾಯಿಲ ಗ್ರಾಮ ಪಂಚಾಯತ್ ನ ಭಾರತ್ ಮಾತಾ ಸಭಾಭವದಲ್ಲಿ 2023-24 ನೇ ಸಾಲಿನ ಮಕ್ಕಳ ಗ್ರಾಮ ಸಭೆಯನ್ನು ಡಿ.19 ರಂದು ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ಎಂ.ಕೆ ವಹಿಸಿಕೊಂಡರು ಹಾಗೂ NRLM ನ ತಾಲೂಕು ಸಂಯೋಜಕರಾದ ವಿನೋದ್ ಪ್ರಸಾದ್ ರವರು ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಸಭೆಯಲ್ಲಿ ಉಪಾಧ್ಯಕ್ಷರಾದ ಸುಗಂಧಿ ಜಗನ್ನಾಥ ಕರ್ನೊಡಿ, ಶಾಲಾ ಮುಖ್ಯೋಪಾಧ್ಯಾಯರಾದ ಜಗನ್ನಾಥ ಹಾಗೂ ಪಡ್ಲಾಡಿ ಮುಖ್ಯೋಪಾಧ್ಯಾಯರಾದ ರಾಜೇಶ್ವರಿ, ಪಂಚಾಯತ್ ಸದಸ್ಯರಾದ ಜಯಂತಿ ಮಹೇಶ್ ಕೆ., ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀನಿವಾಸ ಡಿ.ಪಿ ಹಾಗೂ ಮಾಜಿ ಅಧ್ಯಕ್ಷರಾದ ರುಕ್ಮಯ್ಯ ಕನ್ನಾಜೆ ಮತ್ತು ಕುಂಟಿನಿ ಶಾಲಾ ನಾಯಕಿ ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಸದಸ್ಯರಾದ ಮಹೇಶ್ ಕೆ. ಮಕ್ಕಳ ಹಕ್ಕು, ಕರ್ತವ್ಯಗಳು ಹಾಗೂ ಜವಾಬ್ದಾರಿಗಳ ಬಗ್ಗೆ ಸವಿರವಾಗಿ ಸಭೆಗೆ ಮಾಹಿತಿ ನೀಡಿದರು. ಮಕ್ಕಳಿಗೆ ಶಾಲೆಯಲ್ಲಿ ನಡೆಸಿದ ವಿವಿಧ ಸ್ಪರ್ಧೆಗಳಿಗೆ ಬಹುಮಾನ ವಿತರಿಸಲಾಯಿತು ಮತ್ತು ಶಾಲಾ ಮಕ್ಕಳ ಬೇಡಿಕೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯ ನಿರೂಪಣೆಯನ್ನು ಪಂಚಾಯತ್ ಲೆಕ್ಕಾ ಸಹಾಯಕರಾದ ಸುಪ್ರಿತಾ ಎಸ್ ಶೆಟ್ಟಿ ನಡೆಸಿಕೊಟ್ಟರು.

Related posts

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ನವ ವರ್ಷ-ನವ ವಿಧ ಪರಿಕಲ್ಪನೆಯಡಿ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಉಜಿರೆಯ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಭೇಟಿ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!