38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

ಬೆಳ್ತಂಗಡಿ : ಲಾಯಿಲ ಗ್ರಾಮದ ಕುಂಟಿನಿ ಎಂಬಲ್ಲಿ ಸುಮಾರು 300 ಮನೆಗಳಿದ್ದು ಪಂಚಾಯತ್ ವತಿಯಿಂದ ನಳ್ಳಿನೀರಿನ ವ್ಯವಸ್ಥೆ ಇತ್ತು. ಆದರೆ ಇದೀಗ ಒಂದು ವಾರಗಳಿಂದ ಈ ಕುಂಟಿನಿ ಪ್ರದೇಶ ಗ್ರಾಮಸ್ಥರಿಗೆ ವೋಲ್ಟೇಜ್ ಸಮಸ್ಯೆಯಿಂದಾಗಿ ನೀರಿಗಾಗಿ ಪರದಾಟ ನಡೆಯುತ್ತಿದೆ. ಇದರ ಕುರಿತಾಗಿ ಇಲಾಖೆಯಲ್ಲಿ ವಿಚಾರಿಸಲಾದಾಗ ಅಲ್ಲಿನ ವೋಲ್ಟೇಜ್ ಬೇರೆ ಕಡೆಗೆ ಬದಲಾವಣೆ ಮಾಡಿದ್ದು ಎಂದು ತಿಳಿದು ಬಂತು.
ಆದುದರಿಂದ ನಿಮ್ಮ ಇಲಾಖೆಯಿಂದ ಬದಲಾವಣೆ ಮಾಡಿದ್ದಲ್ಲಿ ತಾವುಗಳು ಈ ಕೂಡಲೆ ಆ ನೊಂದ ಗ್ರಾಮಸ್ಥರ ಸಂಕಷ್ಟಕ್ಕೆ ನೆರವಾಗಿ ಯತಾಸ್ಥಿತಿಯನ್ನು ಕಾಯ್ದುಕೊಳ್ಳಬೇಕಾಗಿ ಗ್ರಾಮಸ್ಥರ ಪರವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್‌ ಇಂಡಿಯಾ ಲಾಯಿಲ ಗ್ರಾಮ ಸಮಿತಿಯ ನಿಯೋಗ ಉಜಿರೆ ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕಾರ್ಯನಿರ್ವಾಹಕ ಅಭಿಯಂತರರು ಈ ವಿಚಾರದಲ್ಲಿ ಮೇಲಿನ ಇಲಾಖೆಗೆ ಸೇರಿದಂತೆ ಸಂಬಂಧಪಟ್ಟವರೊಂದಿಗೆ ಮಾತನಾಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಲಾಯಿಲ ಪಂಚಾಯತ್ ಸದಸ್ಯರು ಸಲೀಂ ಕುಂಟಿನಿ ಹಾಗೂ ಬ್ಲಾಕ್ ಸಮಿತಿಯ ಸದಸ್ಯರಾದ ಸಾಹುಲ್ ಕ್ಯು.ಟಿ.ಎಫ್, ಮುಹಮ್ಮದ್ ಆಲಿ, ಸಲೀಂ ಕುಂಟಿನಿ, ಸಹಲ್ ನೀರ್ಸಾಲ್ ಉಪಸ್ಥಿತರಿದ್ದರು.

Related posts

ಕೊಕ್ಕಡದಲ್ಲಿ ‘ವಿನು ಸ್ಕೂಲ್ ಆಫ್ ಆರ್ಟ್ಸ್ ‘ ಶುಭಾರಂಭ

Suddi Udaya

ಬಡಗಕಾರಂದೂರು: ನಿವೃತ್ತ ಶಿಕ್ಷಕಿ ಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ : ರೂ.144ಕೋಟಿ ವ್ಯವಹಾರ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಧಮ೯ಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ವೇಣೂರು: ತಾಲೂಕು ಧ್ವನಿವರ್ಧಕ-ದೀಪಾಲಂಕಾರ ಮಾಲಕರ ಸಂಘದ ಸಭೆ: ಆ. 22ರಂದು ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ

Suddi Udaya

ಅ.12: ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಆಚರಣೆಯ ಪ್ರಯಕ್ತ ಗ್ರಾಹಕರ ಸಮಾವೇಶ ಮತ್ತು ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!