23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

ಬೆಳ್ತಂಗಡಿ : ಲಾಯಿಲ ಗ್ರಾಮದ ಕುಂಟಿನಿ ಎಂಬಲ್ಲಿ ಸುಮಾರು 300 ಮನೆಗಳಿದ್ದು ಪಂಚಾಯತ್ ವತಿಯಿಂದ ನಳ್ಳಿನೀರಿನ ವ್ಯವಸ್ಥೆ ಇತ್ತು. ಆದರೆ ಇದೀಗ ಒಂದು ವಾರಗಳಿಂದ ಈ ಕುಂಟಿನಿ ಪ್ರದೇಶ ಗ್ರಾಮಸ್ಥರಿಗೆ ವೋಲ್ಟೇಜ್ ಸಮಸ್ಯೆಯಿಂದಾಗಿ ನೀರಿಗಾಗಿ ಪರದಾಟ ನಡೆಯುತ್ತಿದೆ. ಇದರ ಕುರಿತಾಗಿ ಇಲಾಖೆಯಲ್ಲಿ ವಿಚಾರಿಸಲಾದಾಗ ಅಲ್ಲಿನ ವೋಲ್ಟೇಜ್ ಬೇರೆ ಕಡೆಗೆ ಬದಲಾವಣೆ ಮಾಡಿದ್ದು ಎಂದು ತಿಳಿದು ಬಂತು.
ಆದುದರಿಂದ ನಿಮ್ಮ ಇಲಾಖೆಯಿಂದ ಬದಲಾವಣೆ ಮಾಡಿದ್ದಲ್ಲಿ ತಾವುಗಳು ಈ ಕೂಡಲೆ ಆ ನೊಂದ ಗ್ರಾಮಸ್ಥರ ಸಂಕಷ್ಟಕ್ಕೆ ನೆರವಾಗಿ ಯತಾಸ್ಥಿತಿಯನ್ನು ಕಾಯ್ದುಕೊಳ್ಳಬೇಕಾಗಿ ಗ್ರಾಮಸ್ಥರ ಪರವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್‌ ಇಂಡಿಯಾ ಲಾಯಿಲ ಗ್ರಾಮ ಸಮಿತಿಯ ನಿಯೋಗ ಉಜಿರೆ ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕಾರ್ಯನಿರ್ವಾಹಕ ಅಭಿಯಂತರರು ಈ ವಿಚಾರದಲ್ಲಿ ಮೇಲಿನ ಇಲಾಖೆಗೆ ಸೇರಿದಂತೆ ಸಂಬಂಧಪಟ್ಟವರೊಂದಿಗೆ ಮಾತನಾಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಲಾಯಿಲ ಪಂಚಾಯತ್ ಸದಸ್ಯರು ಸಲೀಂ ಕುಂಟಿನಿ ಹಾಗೂ ಬ್ಲಾಕ್ ಸಮಿತಿಯ ಸದಸ್ಯರಾದ ಸಾಹುಲ್ ಕ್ಯು.ಟಿ.ಎಫ್, ಮುಹಮ್ಮದ್ ಆಲಿ, ಸಲೀಂ ಕುಂಟಿನಿ, ಸಹಲ್ ನೀರ್ಸಾಲ್ ಉಪಸ್ಥಿತರಿದ್ದರು.

Related posts

ಪಿಯುಸಿ ಫಲಿತಾಂಶ: ವಾಣಿ ಪ.ಪೂ ಕಾಲೇಜು ವಾಣಿಜ್ಯ ವಿಭಾಗಕ್ಕೆ ಮೂರು ರ‍್ಯಾಂಕ್

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದಿಂದ ನಿವೃತ್ತ ಯೋಧ ಸಿ ಜಾರ್ಜ್ ಕುಟ್ಟಿ ಯವರಿಗೆ ಸನ್ಮಾನ

Suddi Udaya

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗಾಗಿ ರೂ.2.41 ಕೋಟಿ ಅನುದಾನದ ಕಾಮಗಾರಿಗೆ ಶಂಕು ಸ್ಥಾಪನೆ

Suddi Udaya

ಬೆಳ್ತಂಗಡಿ: ಕನ್ನಾಜೆ ನಿವಾಸಿ ಕುಸುಮ ನಿಧನ

Suddi Udaya

ಕೊಯ್ಯೂರು: ಬೆರ್ಕೆ ನಿವಾಸಿ ಚಂದಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!