22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

ಬೆಳ್ತಂಗಡಿ : ಲಾಯಿಲ ಗ್ರಾಮದ ಕುಂಟಿನಿ ಎಂಬಲ್ಲಿ ಸುಮಾರು 300 ಮನೆಗಳಿದ್ದು ಪಂಚಾಯತ್ ವತಿಯಿಂದ ನಳ್ಳಿನೀರಿನ ವ್ಯವಸ್ಥೆ ಇತ್ತು. ಆದರೆ ಇದೀಗ ಒಂದು ವಾರಗಳಿಂದ ಈ ಕುಂಟಿನಿ ಪ್ರದೇಶ ಗ್ರಾಮಸ್ಥರಿಗೆ ವೋಲ್ಟೇಜ್ ಸಮಸ್ಯೆಯಿಂದಾಗಿ ನೀರಿಗಾಗಿ ಪರದಾಟ ನಡೆಯುತ್ತಿದೆ. ಇದರ ಕುರಿತಾಗಿ ಇಲಾಖೆಯಲ್ಲಿ ವಿಚಾರಿಸಲಾದಾಗ ಅಲ್ಲಿನ ವೋಲ್ಟೇಜ್ ಬೇರೆ ಕಡೆಗೆ ಬದಲಾವಣೆ ಮಾಡಿದ್ದು ಎಂದು ತಿಳಿದು ಬಂತು.
ಆದುದರಿಂದ ನಿಮ್ಮ ಇಲಾಖೆಯಿಂದ ಬದಲಾವಣೆ ಮಾಡಿದ್ದಲ್ಲಿ ತಾವುಗಳು ಈ ಕೂಡಲೆ ಆ ನೊಂದ ಗ್ರಾಮಸ್ಥರ ಸಂಕಷ್ಟಕ್ಕೆ ನೆರವಾಗಿ ಯತಾಸ್ಥಿತಿಯನ್ನು ಕಾಯ್ದುಕೊಳ್ಳಬೇಕಾಗಿ ಗ್ರಾಮಸ್ಥರ ಪರವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್‌ ಇಂಡಿಯಾ ಲಾಯಿಲ ಗ್ರಾಮ ಸಮಿತಿಯ ನಿಯೋಗ ಉಜಿರೆ ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕಾರ್ಯನಿರ್ವಾಹಕ ಅಭಿಯಂತರರು ಈ ವಿಚಾರದಲ್ಲಿ ಮೇಲಿನ ಇಲಾಖೆಗೆ ಸೇರಿದಂತೆ ಸಂಬಂಧಪಟ್ಟವರೊಂದಿಗೆ ಮಾತನಾಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಲಾಯಿಲ ಪಂಚಾಯತ್ ಸದಸ್ಯರು ಸಲೀಂ ಕುಂಟಿನಿ ಹಾಗೂ ಬ್ಲಾಕ್ ಸಮಿತಿಯ ಸದಸ್ಯರಾದ ಸಾಹುಲ್ ಕ್ಯು.ಟಿ.ಎಫ್, ಮುಹಮ್ಮದ್ ಆಲಿ, ಸಲೀಂ ಕುಂಟಿನಿ, ಸಹಲ್ ನೀರ್ಸಾಲ್ ಉಪಸ್ಥಿತರಿದ್ದರು.

Related posts

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಪುರ್ಟಾಡೊ ನೇಮಕ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

Suddi Udaya

ಎ.25: ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ- ರೂ.40 ಲಕ್ಷ ವೆಚ್ಚದಲ್ಲಿ ಅಚ್ಚಿನಡ್ಕ ಕೆಲ್ಲಗುತ್ತು ನಲ್ಲಿ ನಿರ್ಮಿಸಲಾದ ಸಂಘದ ನೂತನ ಕಟ್ಟಡ ‘ಪ್ರಬುದ್ಧ’ ಉದ್ಘಾಟನೆ

Suddi Udaya

ಬೆಳ್ತಂಗಡಿ : ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya
error: Content is protected !!