25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

ಬೆಳ್ತಂಗಡಿ : ಲಾಯಿಲ ಗ್ರಾಮದ ಕುಂಟಿನಿ ಎಂಬಲ್ಲಿ ಸುಮಾರು 300 ಮನೆಗಳಿದ್ದು ಪಂಚಾಯತ್ ವತಿಯಿಂದ ನಳ್ಳಿನೀರಿನ ವ್ಯವಸ್ಥೆ ಇತ್ತು. ಆದರೆ ಇದೀಗ ಒಂದು ವಾರಗಳಿಂದ ಈ ಕುಂಟಿನಿ ಪ್ರದೇಶ ಗ್ರಾಮಸ್ಥರಿಗೆ ವೋಲ್ಟೇಜ್ ಸಮಸ್ಯೆಯಿಂದಾಗಿ ನೀರಿಗಾಗಿ ಪರದಾಟ ನಡೆಯುತ್ತಿದೆ. ಇದರ ಕುರಿತಾಗಿ ಇಲಾಖೆಯಲ್ಲಿ ವಿಚಾರಿಸಲಾದಾಗ ಅಲ್ಲಿನ ವೋಲ್ಟೇಜ್ ಬೇರೆ ಕಡೆಗೆ ಬದಲಾವಣೆ ಮಾಡಿದ್ದು ಎಂದು ತಿಳಿದು ಬಂತು.
ಆದುದರಿಂದ ನಿಮ್ಮ ಇಲಾಖೆಯಿಂದ ಬದಲಾವಣೆ ಮಾಡಿದ್ದಲ್ಲಿ ತಾವುಗಳು ಈ ಕೂಡಲೆ ಆ ನೊಂದ ಗ್ರಾಮಸ್ಥರ ಸಂಕಷ್ಟಕ್ಕೆ ನೆರವಾಗಿ ಯತಾಸ್ಥಿತಿಯನ್ನು ಕಾಯ್ದುಕೊಳ್ಳಬೇಕಾಗಿ ಗ್ರಾಮಸ್ಥರ ಪರವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್‌ ಇಂಡಿಯಾ ಲಾಯಿಲ ಗ್ರಾಮ ಸಮಿತಿಯ ನಿಯೋಗ ಉಜಿರೆ ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕಾರ್ಯನಿರ್ವಾಹಕ ಅಭಿಯಂತರರು ಈ ವಿಚಾರದಲ್ಲಿ ಮೇಲಿನ ಇಲಾಖೆಗೆ ಸೇರಿದಂತೆ ಸಂಬಂಧಪಟ್ಟವರೊಂದಿಗೆ ಮಾತನಾಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಲಾಯಿಲ ಪಂಚಾಯತ್ ಸದಸ್ಯರು ಸಲೀಂ ಕುಂಟಿನಿ ಹಾಗೂ ಬ್ಲಾಕ್ ಸಮಿತಿಯ ಸದಸ್ಯರಾದ ಸಾಹುಲ್ ಕ್ಯು.ಟಿ.ಎಫ್, ಮುಹಮ್ಮದ್ ಆಲಿ, ಸಲೀಂ ಕುಂಟಿನಿ, ಸಹಲ್ ನೀರ್ಸಾಲ್ ಉಪಸ್ಥಿತರಿದ್ದರು.

Related posts

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇ‍ಷ ಪೂಜೆ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

Suddi Udaya

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Suddi Udaya

ಮರ ಕಟ್ಟಿಂಗ್ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಮೆಷಿನ್ ತಗುಲಿ ಸಾವ್ಯದ ವ್ಯಕ್ತಿ ಪ್ರಶಾಂತ್ ಪೂಜಾರಿ ಸಾವು

Suddi Udaya

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

Suddi Udaya
error: Content is protected !!