32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

ನಿಡ್ಲೆ: ಪಿಲಿಕಜೆ ಬೈಲುವಾರು ಸಮಿತಿಯ ವತಿಯಿಂದ ಇತ್ತೀಚೆಗೆ ಶ್ರಮದಾನ ನಡೆಯಿತು. ಪ್ರತಿವರ್ಷದಂತೆ 7ನೇ ವರ್ಷದ ಶ್ರಮದಾನವು ನಿಡ್ಲೆ ರಾಜ್ಯ ಹೆದ್ದಾರಿಯಿಂದ ಪಟ್ರಮೆ ಜಿ.ಪಂ ರಸ್ತೆಯ 2 ಬದಿಯ ಗಿಡಗಂಟಿ ಕಡಿದು ಪ್ರಯಾಣಿಕರ ಹಾಗೂ ಶಾಲಾ ಮಕ್ಕಳಿಗೆ ಅನುಕೂಲ ಮಾಡಿದರು.

ಡಾಂಬರು ರಸ್ತೆ ಅಲ್ಲಲ್ಲಿ, ದೊಡ್ಡದಾದ ಹೊಂಡಗಳಿಗೆ ಮಣ್ಣು ಹಾಕಿ ಸಮತಟ್ಟಗೊಳಿಸಲಾಯಿತು. ಕಳೆಕೊಚ್ಚುವ ಯಂತ್ರವನ್ನು ಲಕ್ಷ್ಮಣ ಗೌಡ ನಂಜಿಲ, ಕೃಷ್ಣಪ್ರಸಾದ್ ಐತೂರು, ಪದ್ಮನಾಭ ನಕ್ಕರೆ ಪದ್ಮಯ್ಯಗೌಡ ಪಿಲಿಕಜೆ, ಪೂವಪ್ಪ ಗೌಡ ಪರಾಂಡ, ಚೀಂಕ್ರ ಮಾಪಲಾಜೆ, ಬೆಳಗಿನ ಉಪಹಾರವನ್ನು ರಾಜೇಶ್ ಉಳ್ಳಾಲ್ತಿ ಚಿಕನ್ ಸೆಂಟರ್ ನಿಡ್ಲೆ ಹಾಗೂ ಪಿಕಪ್ ವ್ಯವಸ್ಥೆಯನ್ನು ಜಿತೇಂದ್ರ ಶೆಟ್ಟಿ, ಪೆಟ್ರೋಲ್ ವ್ಯವಸ್ಥೆಯನ್ನು ಯಾದವ್ ಸಣಿಲ, ಊಟದ ವ್ಯವಸ್ಥೆಯನ್ನು ಅಧ್ಯಕ್ಷರಾದ ಹೊನ್ನಪ್ಪಗೌಡ ಹಿರಿಂಬಿ, ತಂಪು ಪಾನೀಯ ವ್ಯವಸ್ಥೆಯನ್ನು ನಾರಾಯಣ ಮಾಪಲಾಜೆ, ಜಯಪ್ರಸಾದ್ ಪರಾಂಡ, ಗೋವಿಂದಗೌಡ, ಶಂಕರಡ್ಡ, ಪುಷ್ಪರಾಜ್ ಪಿಲಿಕಜೆ, ವಸಂತ ಶಂಕರಡ್ಡ ಇವರೆಲ್ಲರು ಕೊಟ್ಟು ಸಹಕರಿಸಿದರು.

ರಾಮಣ್ಣ ಗೌಡ ಹೊಸಮನೆ ಪೆರ್ಲೆ ಹಾಗೂ ಚಿದಾನಂದ ಶೆಟ್ಟಿ ಸಹಕರಿಸಿದರು. ಪಿಲಿಕಜೆ ಬೈಲುವಾರು ಸಮಿತಿಯ ಕಾರ್ಯದರ್ಶಿಯರಾದ ಅಶೋಕ ಪಿಲಿಕಜೆ ಧನ್ಯವಾದ ಸಲ್ಲಿಸಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ “ಮನೆ ಮನೆಗೆ ಗಂಗಾಜಲ”

Suddi Udaya

ಧರ್ಮಸ್ಥಳ: ರಾಷ್ಟ್ರೀಯ ತುಳು ಗುಡಿಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕೆಸರು ಗದ್ದೆ ಕಾರ್ಯಕ್ರಮ

Suddi Udaya

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

Suddi Udaya

ವಿಧಾನ ಸಭಾ ಚುನಾವಣೆ : ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya
error: Content is protected !!