23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

ನಿಡ್ಲೆ: ಪಿಲಿಕಜೆ ಬೈಲುವಾರು ಸಮಿತಿಯ ವತಿಯಿಂದ ಇತ್ತೀಚೆಗೆ ಶ್ರಮದಾನ ನಡೆಯಿತು. ಪ್ರತಿವರ್ಷದಂತೆ 7ನೇ ವರ್ಷದ ಶ್ರಮದಾನವು ನಿಡ್ಲೆ ರಾಜ್ಯ ಹೆದ್ದಾರಿಯಿಂದ ಪಟ್ರಮೆ ಜಿ.ಪಂ ರಸ್ತೆಯ 2 ಬದಿಯ ಗಿಡಗಂಟಿ ಕಡಿದು ಪ್ರಯಾಣಿಕರ ಹಾಗೂ ಶಾಲಾ ಮಕ್ಕಳಿಗೆ ಅನುಕೂಲ ಮಾಡಿದರು.

ಡಾಂಬರು ರಸ್ತೆ ಅಲ್ಲಲ್ಲಿ, ದೊಡ್ಡದಾದ ಹೊಂಡಗಳಿಗೆ ಮಣ್ಣು ಹಾಕಿ ಸಮತಟ್ಟಗೊಳಿಸಲಾಯಿತು. ಕಳೆಕೊಚ್ಚುವ ಯಂತ್ರವನ್ನು ಲಕ್ಷ್ಮಣ ಗೌಡ ನಂಜಿಲ, ಕೃಷ್ಣಪ್ರಸಾದ್ ಐತೂರು, ಪದ್ಮನಾಭ ನಕ್ಕರೆ ಪದ್ಮಯ್ಯಗೌಡ ಪಿಲಿಕಜೆ, ಪೂವಪ್ಪ ಗೌಡ ಪರಾಂಡ, ಚೀಂಕ್ರ ಮಾಪಲಾಜೆ, ಬೆಳಗಿನ ಉಪಹಾರವನ್ನು ರಾಜೇಶ್ ಉಳ್ಳಾಲ್ತಿ ಚಿಕನ್ ಸೆಂಟರ್ ನಿಡ್ಲೆ ಹಾಗೂ ಪಿಕಪ್ ವ್ಯವಸ್ಥೆಯನ್ನು ಜಿತೇಂದ್ರ ಶೆಟ್ಟಿ, ಪೆಟ್ರೋಲ್ ವ್ಯವಸ್ಥೆಯನ್ನು ಯಾದವ್ ಸಣಿಲ, ಊಟದ ವ್ಯವಸ್ಥೆಯನ್ನು ಅಧ್ಯಕ್ಷರಾದ ಹೊನ್ನಪ್ಪಗೌಡ ಹಿರಿಂಬಿ, ತಂಪು ಪಾನೀಯ ವ್ಯವಸ್ಥೆಯನ್ನು ನಾರಾಯಣ ಮಾಪಲಾಜೆ, ಜಯಪ್ರಸಾದ್ ಪರಾಂಡ, ಗೋವಿಂದಗೌಡ, ಶಂಕರಡ್ಡ, ಪುಷ್ಪರಾಜ್ ಪಿಲಿಕಜೆ, ವಸಂತ ಶಂಕರಡ್ಡ ಇವರೆಲ್ಲರು ಕೊಟ್ಟು ಸಹಕರಿಸಿದರು.

ರಾಮಣ್ಣ ಗೌಡ ಹೊಸಮನೆ ಪೆರ್ಲೆ ಹಾಗೂ ಚಿದಾನಂದ ಶೆಟ್ಟಿ ಸಹಕರಿಸಿದರು. ಪಿಲಿಕಜೆ ಬೈಲುವಾರು ಸಮಿತಿಯ ಕಾರ್ಯದರ್ಶಿಯರಾದ ಅಶೋಕ ಪಿಲಿಕಜೆ ಧನ್ಯವಾದ ಸಲ್ಲಿಸಿದರು.

Related posts

ಗುರುವಾಯನಕೆರೆ ಪಾಲಡ್ಕ ಒಕ್ಕೂಟದ ಬೆಳ್ಳಿ ಹಬ್ಬ ಕಾರ್ಯಕ್ರಮ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

Suddi Udaya

ಮೇ 21: ಉತ್ಕೃಷ್ಠ ಸೇವೆಯೊಂದಿಗೆ ಮುನ್ನಡೆಯುತ್ತಿರುವ ಗುರುದೇವ ಸಹಕಾರ ಸಂಘದ ಮೂಡಬಿದಿರೆ ಶಾಖೆ ಶುಭಾರಂಭ

Suddi Udaya

ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ಭವ್ಯ ಸ್ವಾಗತ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!